alex Certify ಕೃಷಿ ಚಟುವಟಿಕೆಗಳಿಗಿಲ್ಲ ಕರ್ಫ್ಯೂ ನಿಯಮ: ಸಚಿವ ಬಿ.ಸಿ. ಪಾಟೀಲ್ ಮಹತ್ವದ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೃಷಿ ಚಟುವಟಿಕೆಗಳಿಗಿಲ್ಲ ಕರ್ಫ್ಯೂ ನಿಯಮ: ಸಚಿವ ಬಿ.ಸಿ. ಪಾಟೀಲ್ ಮಹತ್ವದ ಹೇಳಿಕೆ

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ರಾಜ್ಯದಲ್ಲಿ ಜಾರಿಯಾಗಿರುವ ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ ಕೃಷಿ ಚಟುವಟಿಕೆಗಳಿಗೆ ಅನ್ವಯವಾಗುವುದಿಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕರ್ಫ್ಯೂ ಬೆನ್ನಲ್ಲೇ ಕೆಲವೆಡೆಗಳಲ್ಲಿ ಕೃಷಿ ಪರಿಕರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಧಿಕಾರಿಗಳ ಈ ಕ್ರಮ ಸರಿಯಲ್ಲ. ಅಧಿಕಾರಿಗಳು ರೈತರಿಗೆ ಕೃಷಿ ಚಟುವಟಿಕೆಗಳಿಗೆ ಸಹಕಾರ ನೀಡಬೇಕು ಎಂದರು.

ಸರ್ಕಾರದ ನಿಯಮಗಳು ನಮಗೇ ಅರ್ಥವಾಗುತ್ತಿಲ್ಲ; ಡಿ.ಕೆ.ಶಿವಕುಮಾರ್ ಆಕ್ರೋಶ

ಈಗಾಗಲೇ ಮುಂಗಾರು ಆರಂಭವಾಗಿದ್ದು, ರೈತರಿಗೆ ಬಿತ್ತನೆ ಕಾರ್ಯ, ರಸಗೊಬ್ಬರ, ಮಾರುಕಟ್ಟೆಗೆ ಧಾನ್ಯ ಸಾಗಾಟ ಸೇರಿದಂತೆ ಯಾವುದೇ ಕೆಲಸಗಳಿಗೆ ಪೊಲೀಸರು ಅಡ್ಡಿಪಡಿಸುವಂತಿಲ್ಲ. ಕೊರೊನಾ ಸುರಕ್ಷತೆ, ಸಾಮಾಜಿಕ ಅಂತರದ ಜೊತೆಗೆ ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...