alex Certify ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್‌ ವಿರುದ್ದ ಆರಂಭದಲ್ಲೇ ಅಸಮಾಧಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್‌ ವಿರುದ್ದ ಆರಂಭದಲ್ಲೇ ಅಸಮಾಧಾನ

ಕೆಪಿಸಿಸಿ ಪಟ್ಟಕ್ಕೇರಲು ಡಿ.ಕೆ.ಶಿವಕುಮಾರ್ ಸಜ್ಜಾಗಿದ್ದಾರೆ. ಜೂನ್ 7 ರಂದು ಅಧಿಕೃತ ಪದಗ್ರಹಣ ಕಾರ್ಯಕ್ರಮ ನಿಗದಿಯಾಗಿದೆ. ಈ ಬೆನ್ನಲ್ಲೇ ಸಿದ್ದತೆಗಳು ಕೂಡ ನಡೆಯುತ್ತಿವೆ. ಈ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಬಸವಕಲ್ಯಾಣ ಕ್ಷೇತ್ರದ ಶಾಸಕ ನಡೆಸಿದ್ದಾರೆ.

ಸಭೆಯಲ್ಲಿ ಮಾತನಾಡಿರುವ ಬಿ. ನಾರಾಯಣರಾವ್, ಈಗ ಪೂರ್ವಭಾವಿ ಸಭೆ ಮಾಡಿದ್ದೇವೆ. ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಪದಗ್ರಹಣ ಮಾಡಲಿದ್ದಾರೆ. ಇದರ ತಯಾರಿಯ ಬಗ್ಗೆ ಸಭೆಯಲ್ಲಿ ಮಾತನಾಡಿದ್ದೇವೆ. ಆದರೆ ಡಿಕೆಶಿ ಮಾತ್ರ ನಮ್ಮ ಕೈಗೆ ಸಿಗುತ್ತಿಲ್ಲ. ಎದುರಿಗೆ ಕಂಡರೂ ಮಾತನಾಡುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಇನ್ನು ಆಪರೇಷನ್ ಕಮಲದ ಬಗ್ಗೆ ಕಿಡಿ ಕಾರಿರುವ ಅವರು, ನಮ್ಮನ್ನು ಖರೀದಿ ಮಾಡಬಹುದಾದ ಯಾವ ಪಾರ್ಟಿಯೂ ಇನ್ನೂ ಹುಟ್ಟಿಲ್ಲ. ನಾವು ಪಕ್ಷಕ್ಕೆ ದ್ರೋಹ ಬಗೆಯುವುದಿಲ್ಲ. ಬೇರೆ ಪಕ್ಷಕ್ಕೆ ಹೋಗುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...