alex Certify ಕೆಪಿಸಿಸಿ ಕಛೇರಿಗೆ ಸೈಕಲ್‌ ಏರಿ ಬಂದ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಪಿಸಿಸಿ ಕಛೇರಿಗೆ ಸೈಕಲ್‌ ಏರಿ ಬಂದ ಸಿದ್ದರಾಮಯ್ಯ

ಕೊರೊನಾ ಸಂಕಷ್ಟದ ನಡುವೆ ಕಳೆದ 21 ದಿನಳಿಂದ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ನಿರಂತರವಾಗಿ ಏರಿಕೆ ಕಾಣುತ್ತಿದ್ದು, ಇದನ್ನು ವಿರೋಧಿಸಿ ಕಾಂಗ್ರೆಸ್‌ ನಾಯಕರು ಇಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೈಕಲ್‌ ರ್ಯಾಲಿ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಮ್ಮ ನಿವಾಸದಿಂದ ಸೈಕಲ್‌ ಏರಿ ಕೆಪಿಸಿಸಿ ಕಛೇರಿಗೆ ಆಗಮಿಸಿದ್ದು, ಅವರಿಗೆ ಶಾಸಕ ಜಮೀರ್‌ ಅಹಮ್ಮದ್‌ ಖಾನ್‌, ಮಾಜಿ ಸಚಿವ ಚೆಲುವರಾಯ ಸ್ವಾಮಿ ಮೊದಲಾದವರು ಸಾಥ್‌ ನೀಡಿದ್ದಾರೆ.

ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಪೆಟ್ರೋಲ್‌ – ಡೀಸೆಲ್‌ ಬೆಲೆ ಏರಿಕೆಯಿಂದ ಜನ ಸಾಮಾನ್ಯರು ತತ್ತರಿಸಿಹೋಗಿದ್ದಾರೆ. ಅಗತ್ಯ ವಸ್ತುಗಳ ಬೆಲೆಯೂ ಮುಗಿಲು ಮುಟ್ಟಿದೆ ಎಂದು ಹೇಳಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...