alex Certify ಕೊರೊನಾ ಎಫೆಕ್ಟ್: ಸ್ವಯಂ ನಿರ್ಧಾರ ಕೈಗೊಳ್ಳುತ್ತಿರುವ ವರ್ತಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಎಫೆಕ್ಟ್: ಸ್ವಯಂ ನಿರ್ಧಾರ ಕೈಗೊಳ್ಳುತ್ತಿರುವ ವರ್ತಕರು

ಸಾರ್ವಜನಿಕರಿಗೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಕೊರೊನಾ ಸೋಂಕು ಪೀಡಿತರಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ರುದ್ರ ನರ್ತನ ಆರಂಭಿಸಿದೆ.

ಬೆಂಗಳೂರಿನ ಪಾದರಾಯನಪುರ, ಹೊಂಗಸಂದ್ರ ಮೊದಲಾದ ಕಡೆ ಮಾತ್ರ ಇದ್ದ ಕೊರೊನಾ ಈಗ ಬಹುತೇಕ ಎಲ್ಲ ವಾರ್ಡ್ ಗಳಿಗೂ ವ್ಯಾಪಿಸಿದೆ. ಅದರಲ್ಲೂ ಜನದಟ್ಟಣೆಯಿಂದ ಕೂಡಿರುತ್ತಿದ್ದ ಚಿಕ್ಕಪೇಟೆಗೂ ಮಹಾಮಾರಿ ಕಾಲಿಟ್ಟಿದೆ.

ಇದರಿಂದಾಗಿ ಆತಂಕಗೊಂಡಿರುವ ಅಲ್ಲಿನ ವರ್ತಕರು ಇಂದಿನಿಂದ ಒಂದು ವಾರಗಳ ಕಾಲ ಸ್ವಯಂ ಪ್ರೇರಿತ ಬಂದ್ ಮಾಡಲು ತೀರ್ಮಾನಿಸಿದ್ದಾರೆ. ಇದೇ ರೀತಿಯ ತೀರ್ಮಾನ ಕೈಗೊಳ್ಳಲು ರಾಜ್ಯದ ಇತರೆ ಕೆಲ ಭಾಗಗಳ ವರ್ತಕರು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...