ಇಡೀ ವಿಶ್ವಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ರಾಜ್ಯಕ್ಕೂ ಕಾಲಿಟ್ಟಿದ್ದು, ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೇ ಏರಿಕೆಯಾಗುತ್ತಿದೆ. ಇದರ ಮಧ್ಯೆ ಅಧಿಕಾರದ ಆಸೆಗಾಗಿ ಕೆಲವರು ನಡೆಸುತ್ತಿರುವ ರಾಜಕಾರಣದ ಆಟಕ್ಕೆ ರಾಜ್ಯದ ಜನತೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸಂಕಷ್ಟದ ಸಮಯದಲ್ಲಿ ಜನತೆಯ ನೋವಿಗೆ ಸ್ಪಂದಿಸಬೇಕಿದ್ದ ಜನಪ್ರತಿನಿಧಿಗಳು ಅದನ್ನು ಬಿಟ್ಟು ಅಧಿಕಾರದ ಹಪಾಹಪಿಯಿಂದ ಸಭೆಗಳನ್ನು ನಡೆಸುವ ಮೂಲಕ ಹಾಗೂ ಹೇಳಿಕೆ ನೀಡುವುದರೊಂದಿಗೆ ಗೊಂದಲ ಹುಟ್ಟು ಹಾಕುತ್ತಿದ್ದಾರೆ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ.