alex Certify ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಶಾಲೆ: ಬೇಕಾ ಇದೆಲ್ಲ…. ಎಂದ ನಿರ್ದೇಶಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಶಾಲೆ: ಬೇಕಾ ಇದೆಲ್ಲ…. ಎಂದ ನಿರ್ದೇಶಕ

ಬೆಂಗಳೂರು: ಕೊರೊನಾ ಸೋಂಕು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳನ್ನು ತೆರೆಯಲು ಸರ್ಕಾರ ಚಿಂತನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಖ್ಯಾತ ನಿರ್ದೇಶಕ ಟಿ. ಎನ್. ಸೀತಾರಾಮ್ ಸರ್ಕಾರಕ್ಕೆ ತಮ್ಮದೇ ರೀತಿಯಲ್ಲಿ ಚಾಟಿ ಬೀಸಿದ್ದಾರೆ.

ಶಾಲೆಗಳ ಆರಂಭದ ಬಗ್ಗೆ ಎದ್ದಿರುವ ಚರ್ಚೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಸೀತಾರಾಮ್, ಇಂಥಾ ಕೊರೋನಾ ಅಬ್ಬರದಲ್ಲಿ ಪುಟ್ಟ ಮಕ್ಕಳ ಶಾಲೆಗಳನ್ನು ಬೇರೆ ತೆರೆಯುತ್ತಾರಂತೆ. ಯಾವ ವಾದ ಏನೇ ಇರಲಿ ಒಂದೇ ಒಂದು ಪುಟ್ಟ ಮಗುವಿಗೆ ಏನಾದರೂ ಕೊರೋನಾ ಸಂಬಂಧಿತ ಅಪಾಯವಾದರೆ ಇಡೀ ರಾಜ್ಯದ ತಂದೆ ತಾಯಿಗಳು ಆತಂಕ, ಹಿಂಸೆ ಪಡಲು ಶುರು ಮಾಡುತ್ತಾರೆ. ಹೆಚ್ಚಾದರಂತೂ ರಾಜ್ಯದ ಅಂತಃಕಳೆ ಮಂಕಾಗಿ ಎಲ್ಲರೂ ಪಾಪ ಪ್ರಜ್ಞೆ ಅನುಭವಿಸಬೇಕಾಗುತ್ತದೆ ಎಂದಿದ್ದಾರೆ.

ಬೇಕಾ ಇದೆಲ್ಲಾ… ಒಂದು ವರ್ಷ ಮಕ್ಕಳಿಗೆ ಸುಮ್ಮನೆ ಪ್ರಮೋಷನ್ ಕೊಟ್ಟರೆ ನಷ್ಟವೇನಿಲ್ಲ. ಮುಂದೆ ಅದನ್ನು ಸರಿ ಮಾಡಿಕೊಳ್ಳಬಲ್ಲ ಪ್ರಬುದ್ಧ, ಚಾಣಾಕ್ಷತೆ ಮಕ್ಕಳಿಗಿರುತ್ತದೆ. ಸಧ್ಯಕ್ಕೆ ಶಾಲೆ ಶುರು ಮಾಡುವುದು ಬೇಡ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...