alex Certify ಕೊರೊನಾ ಸೋಂಕಿಗೆ ನಟ ಶ್ರೀನಗರ ಕಿಟ್ಟಿ ಸಹೋದರ ಬಲಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಸೋಂಕಿಗೆ ನಟ ಶ್ರೀನಗರ ಕಿಟ್ಟಿ ಸಹೋದರ ಬಲಿ..!

ಕೊರೊನಾ ಮಹಾಮಾರಿಯಿಂದಾಗಿ ದೇಶದಲ್ಲಿ ಲಕ್ಷಾಂತರ ಮಂದಿ ಸೋಂಕಿಗೆ ಒಳಗಾಗಿದ್ದಾರೆ. ಸಾವಿರಾರು ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಯಾವ ವರ್ಗವನ್ನೂ ಕೊರೊನಾ ಬಿಟ್ಟಿಲ್ಲ. ಇದೀಗ ನಟ ಶ್ರೀನಗರ ಕಿಟ್ಟಿ ಸಹೋದರ ಶಿವಶಂಕರ್ ಕೊರೊನಾಗೆ ಬಲಿಯಾಗಿದ್ದಾರೆ.

ಹೌದು, ಕೊರೊನಾ ಸೋಂಕಿನಿಂದ ಸ್ಯಾಂಡಲ್ ವುಡ್ ನಟ ಶ್ರೀನಗರ ಕಿಟ್ಟಿ ಸಹೋದರ ಶಿವಶಂಕರ್ ಅವರು ಕಳೆದ ಬುಧವಾರ ಮೃತಪಟ್ಟಿದ್ದು ತಡವಾಗಿ ಬೆಳಕಿಗೆ ಬಂದಿದೆ. ಜೂನ್ 29 ರಂದು ಹೃದಯಾಘಾತದಿಂದ ಕಿಟ್ಟಿ ಸಹೋದರ ನಿಧನರಾಗಿದ್ದರು. ನಂತರ ಮೃತದೇಹದಿಂದ ಗಂಟಲು ದ್ರವ ತೆಗೆದು ಕೋವಿಡ್-19 ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿಯಲ್ಲಿ ಪಾಸಿಟಿವ್ ಇರುವುದು ದೃಢಪಟ್ಟಿದೆ.

ಸಹೋದರನಿಗೆ ಕೊರೊನಾ ಇರುವುದು ಧೃಡಪಟ್ಟ ಬೆನ್ನಲ್ಲೇ ಇಡೀ ಕುಟುಂಬ ಕೋವಿಡ್ ಟೆಸ್ಟ್ ಮಾಡಿಸಲಾಗಿದೆ. ಎಲ್ಲರದ್ದು ನೆಗಟಿವ್ ರಿಪೋರ್ಟ್ ಬಂದಿದೆ. ಆದರೂ ಕೂಡ 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ‌ನಲ್ಲಿರಲಿದೆ ಕುಟುಂಬ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...