ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಇಂದು ಇಬ್ಬರು ಸಾವನ್ನಪ್ಪಿದ್ದಾರೆ. ಬೆಂಗಳೂರಿನ ವೃದ್ಧ ಹಾಗೂ ಬೀದರ್ ನ ವೃದ್ಧರಿಬ್ಬರು ಇಂದು ಸಾವನ್ನಪ್ಪಿದ್ದಾರೆ. ಇಬ್ಬರಿಗೂ ಕೊರೊನಾ ಹೊರತು ಬೇರೆ ಆರೋಗ್ಯ ಸಮಸ್ಯೆಗಳಿದ್ದವು.
ಇದೇ ವೇಳೆ ಇಂದು ರಾಜ್ಯದಲ್ಲಿ 9 ಹೊಸ ಕೊರೊನಾ ಪ್ರಕರಣ ಬೆಳಕಿಗೆ ಬಂದಿದೆ. ತುಮಕೂರಿನಲ್ಲಿ ಇಬ್ಬರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ವಿಜಯಪುರದಲ್ಲಿ ಇಬ್ಬರಿಗೆ ಕೊರೊನಾ ಕಾಣಿಸಿಕೊಂಡಿದೆ. ಬೆಳಗಾವಿಯಲ್ಲಿ ಒಬ್ಬರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಬೆಂಗಳೂರು, ಬಾಗಲಕೋಟೆ, ಚಿಕ್ಕಬಳ್ಳಾಪುರ,ಬೀದರ್ ನಲ್ಲಿಯೂ ಇಂದು ಒಂದೊಂದು ಪ್ರಕರಣ ಬೆಳಕಿಗೆ ಬಂದಿದೆ. ಈವರೆಗೆ ರಾಜ್ಯದಲ್ಲಿ 25 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.