alex Certify ‘ಕೊರೊನಾ’ ಸೋಂಕಿನ ಕುರಿತು ಶಾಕಿಂಗ್ ಸಂಗತಿ ಬಿಚ್ಚಿಟ್ಟ ಆರೋಗ್ಯ ಸಚಿವ ಶ್ರೀರಾಮುಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕೊರೊನಾ’ ಸೋಂಕಿನ ಕುರಿತು ಶಾಕಿಂಗ್ ಸಂಗತಿ ಬಿಚ್ಚಿಟ್ಟ ಆರೋಗ್ಯ ಸಚಿವ ಶ್ರೀರಾಮುಲು

ದೇಶದಲ್ಲಿ ಕೊರೊನಾ ಮಹಾಮಾರಿ ಅಬ್ಬರಿಸುತ್ತಿದೆ. ರಾಜ್ಯದಲ್ಲೂ ಕೊರೊನಾ ಆರ್ಭಟಿಸುತ್ತಿದ್ದು, ಸೋಂಕಿನ ಪ್ರಮಾಣ ದಿನೇ ದಿನೇ ಭಾರಿ ಹೆಚ್ಚಳವಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.

ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿದ್ದು ಭೀತಿಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಸೋಂಕು ಹೆಚ್ಚಿರುವ ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗುತ್ತಿದ್ದು, ಸಾರ್ವಜನಿಕರ ಸಂಚಾರಕ್ಕೆ ನಿರ್ಬಂಧ ಹೇರಲಾಗುತ್ತಿದೆ.

ಇದರ ಮಧ್ಯೆ ಆರೋಗ್ಯ ಸಚಿವ ಶ್ರೀರಾಮುಲು ಕೊರೊನಾ ಸೋಂಕಿನ ಕುರಿತು ಶಾಕಿಂಗ್ ಸಂಗತಿಯೊಂದನ್ನು ಹೇಳಿದ್ದು, ದೇಶದಲ್ಲಿ ಶೇಕಡ 70 ರಷ್ಟು ಜನರಿಗೆ ಕೊರೊನಾ ಹರಡಬಹುದು ಎಂದು ತಿಳಿಸಿದ್ದಾರೆ. ವಿಶ್ವಸಂಸ್ಥೆ ಈ ಕುರಿತು ಎಚ್ಚರಿಕೆ ನೀಡಿದ್ದು ಹೀಗಾಗಿ ವೃದ್ಧರು ಮತ್ತು ಮಕ್ಕಳು ಜಾಗೃತರಾಗಿರಬೇಕು ಎಂದು ಸಚಿವರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...