alex Certify ಕೊರೋನಾ ಲಾಕ್ ಡೌನ್ ನಡುವೆ ರೈತರಿಗೆ ಮತ್ತೊಂದು ಸಂಕಷ್ಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಲಾಕ್ ಡೌನ್ ನಡುವೆ ರೈತರಿಗೆ ಮತ್ತೊಂದು ಸಂಕಷ್ಟ

ಇಡೀ ವಿಶ್ವಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ರಾಜ್ಯದಲ್ಲೂ ಆರ್ಭಟ ನಡೆಸುತ್ತಿದೆ. ಇದರ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಕಳೆದ ಎರಡು ತಿಂಗಳಿನಿಂದ ಲಾಕ್ ಡೌನ್ ಜಾರಿಗೊಳಿಸಿರುವ ಕಾರಣ ರೈತರು ತಮ್ಮ ಬೆಳೆಗಳನ್ನು ಮಾರಾಟ ಮಾಡಲಾಗದೆ ಪರಿತಪಿಸಿದ್ದರು.

ಹೀಗಾಗಿ ಬೆಳೆದ ಬೆಳೆಗಳನ್ನು ಹೊಲದಲ್ಲಿಯೇ ಹಲವರು ನಾಶಪಡಿಸಿದ್ದು, ಆ ಬಳಿಕ ಎಚ್ಚೆತ್ತ ಸರ್ಕಾರಗಳು ನೆರವು ಘೋಷಿಸಿದ್ದವು. ಇದೀಗ ಬಹಳಷ್ಟು ಸಡಿಲಿಕೆಗಳೊಂದಿಗೆ ನಾಲ್ಕನೇ ಹಂತದ ಲಾಕ್ ಡೌನ್ ಜಾರಿಯಲ್ಲಿದ್ದು, ಇದರ ಮಧ್ಯೆ ಭತ್ತದ ಬೆಲೆ ಕುಸಿತ ಕಂಡಿರುವುದು ರೈತರಿಗೆ ಶಾಕ್ ನೀಡಿದೆ.

ಸಾಲಸೋಲ ಮಾಡಿ ಬೆಳೆದ ಬೆಳೆಗೆ ಸೂಕ್ತ ಧಾರಣೆ ಲಭ್ಯವಾಗದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಸಂಕಷ್ಟ ಎದುರಿಸಬೇಕಾಗುತ್ತದೆ ಎಂಬ ಆತಂಕ ರೈತರನ್ನು ಕಾಡುತ್ತಿದೆ. ಹೀಗಾಗಿ ಸರ್ಕಾರ ಬೆಂಬಲ ಬೆಲೆ ಘೋಷಿಸುವುದರ ಜೊತೆಗೆ ಖರೀದಿ ಕೇಂದ್ರಗಳನ್ನು ಆರಂಭಿಸಬೇಕೆಂಬ ಒತ್ತಾಯ ಕೇಳಿಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...