alex Certify ಕೋವಿಡ್ ಕರ್ಫ್ಯೂ ಹಿನ್ನೆಲೆ; ಊರಿಗೆ ಹೊರಟಿದ್ದ ನಾಲ್ವರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೋವಿಡ್ ಕರ್ಫ್ಯೂ ಹಿನ್ನೆಲೆ; ಊರಿಗೆ ಹೊರಟಿದ್ದ ನಾಲ್ವರ ದುರ್ಮರಣ

ಬಳ್ಳಾರಿ: ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ 14 ದಿನಗಳ ಕೋವಿಡ್ ಕರ್ಫ್ಯೂ ಆರಂಭವಾಗುತ್ತಿದ್ದಂತೆ ಜನರು ತಮ್ಮ ಊರುಗಳತ್ತ ಮುಖ ಮಾಡಿದ್ದಾರೆ. ಬೆಂಗಳೂರಿನಲ್ಲಿದ್ದ ಹಲವರು ಗಂಟು ಮೂಟೆ ಕಟ್ಟಿಕೊಂಡು ಮನೆ ಖಾಲಿ ಮಾಡುತ್ತಿದ್ದಾರೆ. ಕರ್ಫ್ಯೂ ಆತಂಕದಲ್ಲಿ ಊರು ಸೇರಬೇಕೆಂಬ ಧಾವಂತದಲ್ಲಿ ಹೊರಟಿದ್ದ ಕುಟುಂಬವೊಂದು ಭೀಕರ ಅಪಘಾತಕ್ಕೆ ಬಲಿಯಾಗಿದೆ.

ರಾಜ್ಯದಲ್ಲಿ 14 ದಿನಗಳ ಕರ್ಫ್ಯೂ ಆರಂಭವಾಗಿದ್ದರಿಂದ ಬೆಂಗಳೂರಿನಲ್ಲಿದ್ದ ಕುಟುಂಬವೊಂದು ತಮ್ಮ ಊರಾದ ಬಳ್ಳಾರಿಗೆ ಕಾರಿನಲ್ಲಿ ತೆರಳುತ್ತಿತ್ತು. ಆದರೆ ಸಿರಗುಪ್ಪದ ತಕ್ಕಲಕೋಟೆ ಎಂಬಲ್ಲಿ ಕಾರು, ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ.

 ಕೊರೋನಾಗೆ ಮತ್ತೊಬ್ಬ ಕಲಾವಿದ ಬಲಿ, ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಪುತ್ರ ನಿಧನ

ಅಪಘಾತದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ನಿರೀಕ್ಷಕ ಬಸವರಾಜು (52), ಭೀಮರಾವ (30), ರೇವಣಸಿದ್ದ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...