alex Certify ಕೋವಿಡ್ ನಿಯಮ ಪಾಲಿಸುವಂತೆ ಬುದ್ಧಿ ಹೇಳಿದ ಪೊಲೀಸರೊಂದಿಗೆ ವಾಗ್ವಾದ; ನಗರಸಭೆ ಉಪಾಧ್ಯಕ್ಷನ ಮಗ ಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೋವಿಡ್ ನಿಯಮ ಪಾಲಿಸುವಂತೆ ಬುದ್ಧಿ ಹೇಳಿದ ಪೊಲೀಸರೊಂದಿಗೆ ವಾಗ್ವಾದ; ನಗರಸಭೆ ಉಪಾಧ್ಯಕ್ಷನ ಮಗ ಬಂಧನ

ಗದಗ: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯಾದ್ಯಂತ ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದ್ದು, ಈ ನಡುವೆ ಕೋವಿಡ್ ನಿಯಮ ಪಾಲಿಸದೇ ಬೇಜವಾಬ್ದಾರಿ ಮೆರೆದ ನಗರಸಭೆ ಮಾಜಿ ಉಪಾಧ್ಯಕ್ಷನ ಮಗನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ವಿನಾಯಕ ಬಾಕಳೆ ಎಂದು ಗುರುತಿಸಲಾಗಿದೆ. ಕೊರೊನಾ ಮಾರ್ಗಸೂಚಿಯನ್ನು ಉಲ್ಲಂಘಿಸಿದ್ದಲ್ಲದೇ ಫರ್ನಿಚರ್ ಅಂಗಡಿಯಲ್ಲಿ ಮಾಸ್ಕ್, ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನಿಂಗ್ ಇಡದೇ ನಿರ್ಲಕ್ಷ್ಯ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ನಿಯಮ ಪಾಲಿಸುವಂತೆ ಸೂಚಿಸಿದ್ದಾರೆ. ಇದರಿಂದ ರೊಚ್ಚಿಗೆದ್ದ ವಿನಾಯಕ ಪೊಲೀಸರ ಜೊತೆ ವ್ವಾಗ್ವಾದಕ್ಕಿಳಿದಿದ್ದಾನೆ. ಪರಿಸ್ಥಿತಿ ಕೈಮೀರುತ್ತಿದ್ದಂತೆಯೇ ವಿನಾಯಕನನ್ನು ಪೊಲೀಸರು ಬಂಧಿಸಿದ್ದಾರೆ.

ಮಾಜಿ ಪತಿ ತಂದೆಯನ್ನೇ ಪ್ರೀತಿಸಿ ಮದುವೆಯಾದ ಮಹಿಳೆ..!

ಈ ಮೂಲಕ ಪೊಲೀಸರು ಕೋವಿಡ್ ನಿಯಮ ಉಲ್ಲಂಘಿಸಿದರೆ ಪ್ರಭಾವಿಗಳ ವಿರುದ್ಧವೂ ಕಠಿಣ ಕ್ರಮದ ಸಂದೇಶ ರವಾನಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...