alex Certify ‘ಕ್ವಾರಂಟೈನ್’ ಕುರಿತು ಪರಿಷ್ಕೃತ ಆದೇಶ ಹೊರಡಿಸಿದ ಆರೋಗ್ಯ ಇಲಾಖೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕ್ವಾರಂಟೈನ್’ ಕುರಿತು ಪರಿಷ್ಕೃತ ಆದೇಶ ಹೊರಡಿಸಿದ ಆರೋಗ್ಯ ಇಲಾಖೆ

ಲಾಕ್ ಡೌನ್ ಕಾರಣಕ್ಕಾಗಿ ಕಳೆದ ಎರಡು ತಿಂಗಳಿನಿಂದ ಸ್ಥಗಿತಗೊಂಡಿದ್ದ ದೇಶಿಯ ವಿಮಾನ ಹಾರಾಟ ಈಗ ಆರಂಭವಾಗಿದೆ. ಹೀಗಾಗಿ ಹೊರರಾಜ್ಯಗಳಲ್ಲಿ ಸಿಲುಕಿಕೊಂಡಿದ್ದವರು ಈಗ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ಈ ರೀತಿ ಆಗಮಿಸುವವರು ನಿಯಮಾವಳಿಗಳ ಪ್ರಕಾರ ಒಂದು ವಾರ ಕಾಲ ಸಾಂಸ್ಥಿಕ ಕ್ವಾರಂಟೈನ್ ಗೆ ಒಳಗಾಗಬೇಕಿತ್ತು. ಆ ಬಳಿಕ ಮತ್ತೊಂದು ವಾರದ ಕಾಲ ಹೋಮ್ ಕ್ವಾರಂಟೈನ್ ನಲ್ಲಿ ಇರಬೇಕಾಗುತ್ತದೆ.

ಆದರೆ ಸೋಮವಾರದಂದು ನವದೆಹಲಿಯಿಂದ ಆಗಮಿಸಿದ ಕೇಂದ್ರ ಸಚಿವ ಸದಾನಂದಗೌಡ ಈ ನಿಯಮಗಳನ್ನು ಪಾಲಿಸದೆ ನೇರವಾಗಿ ಕಛೇರಿಗೆ ತೆರಳಿದ್ದರು. ಇದು ಪರ-ವಿರೋಧದ ಚರ್ಚೆಗೆ ಕಾರಣವಾಗಿತ್ತು.

ಆ ಬಳಿಕ ಆರೋಗ್ಯ ಇಲಾಖೆ ಕ್ವಾರಂಟೈನ್ ನಿಯಮಾವಳಿಗಳ ಕುರಿತು ಪರಿಷ್ಕೃತ ಆದೇಶ ಹೊರಡಿಸಿದ್ದು, ಅಧಿಕೃತ ಕಚೇರಿ ಕರ್ತವ್ಯದ ಮೇಲೆ ವಿವಿಧ ರಾಜ್ಯಗಳ ನಡುವೆ ಸಂಚರಿಸುವ ಕೇಂದ್ರ ಮತ್ತು ರಾಜ್ಯ ಸಚಿವರು ಹಾಗೂ ಅಧಿಕಾರಿಗಳು ಕಡ್ಡಾಯವಾಗಿ ಕ್ವಾರಂಟೈನ್ ಗೆ ಒಳಪಡುವ ಅಗತ್ಯವಿಲ್ಲ ಎಂದು ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...