alex Certify ಖಾತೆ ಹಂಚಿಕೆ ಸುಲಭದ ಮಾತಲ್ಲ; ಯಾರಿಗೂ ಯಾವ ಅಸಮಾಧಾನವೂ ಇಲ್ಲ ಎಂದ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖಾತೆ ಹಂಚಿಕೆ ಸುಲಭದ ಮಾತಲ್ಲ; ಯಾರಿಗೂ ಯಾವ ಅಸಮಾಧಾನವೂ ಇಲ್ಲ ಎಂದ ಸಿಎಂ

ಬೆಂಗಳೂರು: ಖಾತೆ ಹಂಚಿಕೆ ಹಾಗೂ ಬದಲಾವಣೆಯಲ್ಲಿ ಯಾವುದೇ ಅಸಮಾಧಾನವಿಲ್ಲ. ಎಲ್ಲರ ಜೊತೆಯೂ ನಾನು ಮಾತನಾಡಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಇರುವುದರಲ್ಲಿಯೇ ಖಾತೆ ಹಂಚಿಕೆ ಮಾಡಿದ್ದೇವೆ. ಈಗ ಕೊಟ್ಟಿರುವ ಖಾತೆಯನ್ನು ಅವರು ನಿಭಾಯಿಸಲಿ. ಒಂದು ವೇಳೆ ಅವರಿಗೆ ಖಾತೆ ನಿಭಾಯಿಸಲು ಸಾಧ್ಯವಿಲ್ಲ ಎಂದರೆ ಮುಂದಿನ ದಿನಗಳಲ್ಲಿ ನೋಡೋಣ ಎಂದರು.

ಸಚಿವ ಮಾಧುಸ್ವಾಮಿ, ಕೆ. ಗೋಪಾಲಯ್ಯ ಸಮಾಧಾನವಾಗಿದ್ದಾರೆ. ಯಾರಿಗೂ ಯಾವುದೇ ರೀತಿಯ ಅಸಮಾಧಾನಗಳಿಲ್ಲ. ಸಚಿವ ಸ್ಥಾನ ಹಂಚಿಕೆ ಮಾಡುವುದು ಸುಲಭದ ಮಾತಲ್ಲ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...