alex Certify ಖುದ್ದು ಯುವತಿಯೇ ಬಂದು ಹೇಳಿಕೆ ನೀಡಲಿ ಎಂದ ಸತೀಶ್ ಜಾರಕಿಹೊಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖುದ್ದು ಯುವತಿಯೇ ಬಂದು ಹೇಳಿಕೆ ನೀಡಲಿ ಎಂದ ಸತೀಶ್ ಜಾರಕಿಹೊಳಿ

ಬೆಳಗಾವಿ: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಡೆಸುವ ಸುದ್ದಿಗೋಷ್ಠಿ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ನಡುವೆ ಖುದ್ದು ಯುವತಿಯೇ ಬಂದು ಹೇಳಿಕೆಗಳನ್ನು ನೀಡಿದರೆ ಮಾತ್ರ ಎಲ್ಲ ಗೊಂದಲಗಳಿಗೂ ತೆರೆ ಬೀಳಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ರಮೇಶ್ ಜಾರಕಿಹೊಳಿ ಸಹೋದರ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಗೋಕಾಕ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಯುವತಿ ವಿಡಿಯೋ ಹೇಳಿಕೆಗಳನ್ನು ನೀಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಎಲ್ಲಾ ಗೊಂದಲಗಳು ಮುಂದುವರೆಯುತ್ತಲೇ ಇರುತ್ತದೆ. ಹಾಗಾಗಿ ಆಕೆ ಪೊಲೀಸರ ಮುಂದೆ ಬಂದು ಖುದ್ದು ಹೇಳಿಕೆ ನೀಡಬೇಕು ಎಂದರು.

ಡಿ.ಕೆ. ಶಿವಕುಮಾರ್ ರಾಜೀನಾಮೆಗೆ ಬಿಜೆಪಿ ಆಗ್ರಹ

ಕಳೆದ 20 ದಿನಗಳಿಂದ ಸಿಡಿ ಕೇಸ್ ಯಾರಿಗೂ ನಿಲುಕುತ್ತಿಲ್ಲ. ಪೊಲೀಸ್ ಇಲಾಖೆ, ರಾಜ್ಯದ ಜನತೆ ಎಲ್ಲರೂ ಹಲವು ರೀತಿ ಗೊಂದಲದಲ್ಲಿದ್ದಾರೆ. ಹಾಗಾಗಿ ಯುವತಿಯೇ ಬಂದು ಹೇಳಿಕೆ ನೀಡುವವರೆಗೂ ಗೊಂದಲಗಳಿಗೆ ತೆರೆ ಬೀಳುವುದಿಲ್ಲ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...