alex Certify ಗುಂಡಿನ ದಾಳಿಗೆ ಬಲಿಯಾದ ಬಿಜೆಪಿ ಮುಖಂಡನ ಹತ್ಯೆ ಆರೋಪಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಂಡಿನ ದಾಳಿಗೆ ಬಲಿಯಾದ ಬಿಜೆಪಿ ಮುಖಂಡನ ಹತ್ಯೆ ಆರೋಪಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳ್ಳಂ ಬೆಳಿಗ್ಗೆ ನೆತ್ತರು ಹರಿದಿದೆ. ಬಿಜೆಪಿ ಮುಖಂಡನನ್ನು ಕೊಲೆ ಮಾಡಿದ್ದ ಆರೋಪಿಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಭೀಕರವಾಗಿ ಹತ್ಯೆ ಮಾಡಿದ್ದಾರೆ.

ಸಂಪತ್ ಕುಮಾರ್ ಹತ್ಯೆಯಾಗಿರುವ ಕೊಲೆ ಆರೋಪಿ, ಸುಳ್ಯದ ಶಾಂತಿನಗರದಲ್ಲಿ ಈ ಘಟನೆ ನಡೆದಿದೆ. ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಎಂಬುವವರನ್ನು ಹತ್ಯೆ ಮಾಡಿದ್ದ ಆರೋಪದಲ್ಲಿ ಸಂಪತ್ ಕುಮಾರ್ ಜೈಲು ಸೇರಿದ್ದ. ಕೆಲ ದಿನಗಳ ಹಿಂದೆ ಜಾಮೀನಿನ ಮೇಲೆ ಬಿಡುಗಡೆಯಾಗಿ ಬಂದಿದ್ದ.

ಇಂದು ಮನೆಯಿಂದ ಹೊರ ಬರುತ್ತಿದ್ದಂತೆಯೇ ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಸಂಪತ್ ಕುಮಾರ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಸ್ಥಳದಲ್ಲೇ ಸಂಪತ್ ಕುಮಾರ್ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...