alex Certify ಚಾಮರಾಜನಗರಕ್ಕೂ ಕಾಲಿಟ್ಟ ಕೊರೊನಾ…? ಪೇದೆಯಿಂದ ಹಸಿರು ವಲಯದಲ್ಲಿ ಆತಂಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಾಮರಾಜನಗರಕ್ಕೂ ಕಾಲಿಟ್ಟ ಕೊರೊನಾ…? ಪೇದೆಯಿಂದ ಹಸಿರು ವಲಯದಲ್ಲಿ ಆತಂಕ

ಬೆಂಗಳೂರಿನ ಪೊಲೀಸ್ ಪೇದೆ ಈಗ ದೊಡ್ಡ ಸಮಸ್ಯೆಯಾಗ್ತಿದ್ದಾರೆ. ನಿನ್ನೆ ಪೊಲೀಸ್ ಪೇದೆಗೆ ಕೊರೊನಾ ಸೋಂಕಿರುವುದು ಪತ್ತೆಯಾಗಿತ್ತು. ಈ ಪೊಲೀಸ್ ಪೇದೆ ಬೆಂಗಳೂರು ಮಾತ್ರವಲ್ಲ ಹಸಿರು ವಲಯ ಚಾಮರಾಜನಗರಕ್ಕೂ ಹೋಗಿ ಬಂದಿದ್ದರು. ಇದೇ ಕಾರಣಕ್ಕೆ ಈಗ ಚಾಮರಾಜನಗರದಲ್ಲಿ ಕೊರೊನಾ ಭಯ ಶುರುವಾಗಿದೆ.

ಪೊಲೀಸ್ ಪೇದೆ ಮಾವನ ಅನಾರೋಗ್ಯ ಹಿನ್ನಲೆಯಲ್ಲಿ ಬೆಳತ್ತೂರಿಗೆ ಬಂದಿದ್ದರು ಎನ್ನಲಾಗಿದೆ. ಅಲ್ಲಿ ಸಂಬಂಧಿಕರು, ಸ್ನೇಹಿತರು, ಪೆಟ್ರೋಲ್ ಬಂಕ್ ಗೆ ಭೇಟಿ ನೀಡಿದ್ದರು. 18 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಹಾಗೆ ಎರಡನೇ ಸಂಪರ್ಕಕ್ಕೆ ಬಂದವರ ತನಿಖೆ ನಡೆಯುತ್ತಿದೆ.

ಪೇದೆ ನಿನ್ನೆ ಬೆಳತ್ತೂರಿಗೆ ಹೋಗಿ ಸಂಜೆ ಬೆಂಗಳೂರಿಗೆ ವಾಪಸ್ ಬಂದಿದ್ದರು. ಬೆಂಗಳೂರಿಗೆ ಬಂದ ನಂತ್ರ ಪರೀಕ್ಷೆ ನಡೆದಿದೆ. ಮೊದಲ ಬಾರಿ ನೆಗೆಟಿವ್ ಬಂದಿತ್ತು. ಎರಡನೇ ಬಾರಿ ಪಾಸಿಟಿವ್ ಬಂದಿದೆ. ಬೆಂಗಳೂರಿನಲ್ಲಿ ಪೇದೆ ಸಂಪರ್ಕಕ್ಕೆ ಬಂದಿದ್ದ 45 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. 21 ಪೊಲೀಸರಿಗೆ ಕ್ವಾರಂಟೈನ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...