alex Certify ಜಿಲ್ಲಾ ಉಸ್ತುವಾರಿ ಸಚಿವರ ನೇಮಕದಲ್ಲಿ ಮತ್ತೆ ಬದಲಾವಣೆ ಮಾಡಿದ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಿಲ್ಲಾ ಉಸ್ತುವಾರಿ ಸಚಿವರ ನೇಮಕದಲ್ಲಿ ಮತ್ತೆ ಬದಲಾವಣೆ ಮಾಡಿದ ಸಿಎಂ

ನಾಲ್ಕು ದಿನಗಳ ಹಿಂದೆಯಷ್ಟೇ ಸಚಿವ ಪ್ರಭು ಚವ್ಹಾಣ್​​​ರ ಕೈಲಿದ್ದ ಬೀದರ್​ ಉಸ್ತುವಾರಿಯನ್ನ ಸಚಿವ ಅರವಿಂದ ಲಿಂಬಾವಳಿಗೆ ನೀಡಿದ್ದ ರಾಜ್ಯ ಸರ್ಕಾರ ಇದೀಗ ತನ್ನ ಆದೇಶವನ್ನ ಮತ್ತೊಮ್ಮೆ ಬದಲಾಯಿಸಿದೆ. ಈ ಮೂಲಕ ಬೀದರ್​ ಉಸ್ತುವಾರಿ ಪುನಃ ಸಚಿವ ಪ್ರಭು ಚವ್ಹಾಣ್​ರ ಕೈ ಸೇರಿದೆ.

ಸಿಎಂ ಯಡಿಯೂರಪ್ಪ ಸೂಚನೆಯಂತೆ ಬೀದರ್​ ಜಿಲ್ಲೆಯ ಉಸ್ತುವಾರಿಯನ್ನ ಪುನಃ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್​ರಿಗೆ ನೀಡಲಾಗಿದೆ. ಅರಣ್ಯ, ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿಗೆ ಕೋಲಾರ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ. ಇನ್ನು ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಸಚಿವ ಆರ್​. ಶಂಕರ್​ಗೆ ಯಾದಗಿರಿ ಜಿಲ್ಲೆಯ ಉಸ್ತುವಾರಿಯನ್ನ ನೀಡಲಾಗಿದೆ.

2ನೇ ತಾರೀಖಿನಂದು ಸರ್ಕಾರ ಹೊರಡಿಸಿದ್ದ ಅಧಿಸೂಚನೆಯ ಪ್ರಕಾರ ಯಾದಗಿರಿ ಜಿಲ್ಲೆ ಉಸ್ತುವಾರಿಯನ್ನ ಪ್ರಭು ಚವ್ಹಾಣರಿಗೂ ಬೀದರ್​ ಜಿಲ್ಲೆಯ ಉಸ್ತುವಾರಿ ಅರವಿಂದ ಲಿಂಬಾವಳಿಗೂ ಹಾಗೂ ಕೋಲಾರ ಜಿಲ್ಲೆಯ ಉಸ್ತುವಾರಿಯನ್ನ ಎಂಟಿಬಿ ನಾಗರಾಜುರಿಗೆ ನೀಡಲಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...