alex Certify ಟ್ರಾಕ್ಟರ್ ಪರೇಡ್ ನಲ್ಲಿ ಅಹಿತಕರ ಘಟನೆ ನಡೆದರೆ ಪ್ರಧಾನಿ ಮೋದಿ ಸರ್ಕಾರವೇ ಹೊಣೆ ಎಂದ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟ್ರಾಕ್ಟರ್ ಪರೇಡ್ ನಲ್ಲಿ ಅಹಿತಕರ ಘಟನೆ ನಡೆದರೆ ಪ್ರಧಾನಿ ಮೋದಿ ಸರ್ಕಾರವೇ ಹೊಣೆ ಎಂದ ಸಿದ್ದರಾಮಯ್ಯ

ಬೆಂಗಳೂರು: ರೈತರ ಟ್ರ್ಯಾಕ್ಟರ್ ರ್ಯಾಲಿ ತೀವ್ರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಸರಣಿ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ದೆಹಲಿಯಲ್ಲಿ ನಡೆಯುತ್ತಿರುವ ರೈತರ ಟ್ರಾಕ್ಟರ್ ಪರೇಡ್‌ ನಲ್ಲಿ ಅಹಿತಕರ ಘಟನೆಗಳು ನಡೆದರೆ ಅದಕ್ಕೆ ಪ್ರಧಾನಿ ಮೋದಿ ಸರ್ಕಾರವೇ ಹೊಣೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ರೈತ ಹೋರಾಟಗಾರರ ಆಕ್ರೋಶ ಸ್ಪೋಟಗೊಳ್ಳಲು ಅವಕಾಶ ನೀಡದೆ ಪ್ರಧಾನಿ ಮೋದಿ ತಕ್ಷಣ ರೈತ ವಿರೋಧಿ ಕಾನೂನುಗಳನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ರಾಜ್ಯದಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಪೊಲೀಸರ ಮೂಲಕ ಹತ್ತಿಕ್ಕಲು ಮುಖ್ಯಮಂತ್ರಿಗಳು ಯತ್ನಿಸಿದರೆ ತಮ್ಮ ರೈತ ವಿರೋಧಿ ನಿಲುವಿಗೆ ತಕ್ಕ ಪ್ರತಿಫಲವನ್ನು ಉಣ್ಣಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...