alex Certify ಡಿಕೆಶಿ ಆಪ್ತನ ಮನೆಯಲ್ಲಿ ಸಿಬಿಐ ಅಧಿಕಾರಿಗಳ ದಾಳಿ ಅಂತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿಕೆಶಿ ಆಪ್ತನ ಮನೆಯಲ್ಲಿ ಸಿಬಿಐ ಅಧಿಕಾರಿಗಳ ದಾಳಿ ಅಂತ್ಯ

ಹಾಸನ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಅವರ ಸಹೋದರ ಡಿ.ಕೆ.ಸುರೇಶ್ ಅವರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿರುವ ಬೆನ್ನಲ್ಲೇ ಇತ್ತ ಹಾಸನದಲ್ಲಿ ಡಿಕೆಶಿ ಆಪ್ತನ ಮನೆ ಮೇಲೂ ಸಿಬಿಐ ದಾಳಿ ನಡೆದಿದೆ.

ಡಿ.ಕೆ.ಶಿವಕುಮಾರ್ ಆಪ್ತ ಸಚಿನ್ ನಾರಾಯಣ್ ಅವರ ಹಾಸನದ ಬಿ.ಎಂ ರಸ್ತೆಯಲ್ಲಿನ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, ಸತತ ನಾಲ್ಕು ಗಂಟೆಗಳ ಕಾಲ ಅಧಿಕಾರಿಗಳು ಮನೆಯಲ್ಲಿ ಶೋಧ ನಡೆಸಿದ್ದಾರೆ.

ಇದೀಗ ಸಚಿನ್ ನಾರಾಯಣ್ ನಿವಾಸದಲ್ಲಿನ ಸಿಬಿಐ ದಾಳಿ ಅಂತ್ಯಗೊಂಡಿದ್ದು, ಹಲವು ದಾಖಲೆ ಪತ್ರಗಳ ಮೂಲಕ ಅಧಿಕಾರಿಗಳು ನಿರ್ಗಮಿಸಿದ್ದಾರೆ ಎಂದು ತಿಳಿದು ಬಂದಿದೆ. ಸಚಿನ್ ನಾರಾಯಣ್, ಡಿ.ಕೆ.ಶಿವಕುಮಾರ್ ಅವರ ಹಲವು ವ್ಯವಹಾರಗಳಲ್ಲಿ ಪಾಲುದಾರರು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...