alex Certify ಡಿಕೆಶಿ ಆರೋಪ ʼಭೂತದ ಬಾಯಲ್ಲಿ ಭಗವದ್ಗೀತೆʼ ಎಂದ ಸಚಿವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿಕೆಶಿ ಆರೋಪ ʼಭೂತದ ಬಾಯಲ್ಲಿ ಭಗವದ್ಗೀತೆʼ ಎಂದ ಸಚಿವ

ಬೆಂಗಳೂರು: ತಮ್ಮ ಫೋನ್ ಟ್ಯಾಪಿಂಗ್ ಮಾಡಲಾಗುತ್ತಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಕ್ಕೆ ತಿರುಗೇಟು ನೀಡಿರುವ ಕಂದಾಯ ಸಚಿವ ಆರ್. ಅಶೋಕ್ ಇದೊಂದು ರೀತಿಯಲ್ಲಿ ಭೂತದ ಬಾಯಲ್ಲಿ ಭಗವದ್ಗೀತೆ ಎಂಬಂತಿದೆ ಎಂದಿದ್ದಾರೆ.

ಡಿಕೆಶಿ ಆರೋಪಕ್ಕೆ ಪ್ರತಿಕ್ರಿಯಿಸಿರುವ ಆರ್. ಅಶೋಕ್, ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದಾಗ ಫೋನ್ ಕದ್ದಾಲಿಕೆಯಾಗಿರುವ ವಿಷಯ ಎಲ್ಲರಿಗೂ ಗೊತ್ತಿದೆ. ಯಾರಿಗೆ ಫೋನ್ ಟ್ಯಾಪಿಂಗ್ ಮಾಡಿ ಅನುಭವವಿದೆಯೋ, ಯಾರ ಸರ್ಕಾರ ಇದ್ದಾಗ ಫೋನ್ ಟ್ಯಾಪ್ ಮಾಡಿತ್ತೋ ಅಂತವರೇ ಈಗ ಫೋನ್ ಟ್ಯಾಪಿಂಗ್ ಬಗ್ಗೆ ಹೇಳುತ್ತಿರುವುದು ಅಚ್ಚರಿ ಎನಿಸುತ್ತಿದೆ. ಇದೊಂದು ರೀತಿಯಲ್ಲಿ ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿದಂತಿದೆ ಎಂದು ಕಿಡಿಕಾರಿದ್ದಾರೆ.

ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅಂತಹ ವ್ಯಕ್ತಿಯಲ್ಲ. ಅಲ್ಲದೇ ನಮ್ಮ ಸರ್ಕಾರಕ್ಕೆ ಯಾರ ಫೋನ್ ಟ್ಯಾಪ್ ಮಾಡುವ ಅವಶ್ಯಕತೆಯಿಲ್ಲ ನಾವು ಅಂತಹ ಸಂಸ್ಕೃತಿಯಿಂದ ಬಂದವರಲ್ಲ. ಇದೇನಿದ್ದರು ಕಾಂಗ್ರೆಸ್ ನವರಿಗೆ ಮಾತ್ರ ಅಭ್ಯಾಸ ಎಂದು ವಾಗ್ದಾಳಿ ನಡೆಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...