alex Certify ಡಿ.ಕೆ.ಶಿವಕುಮಾರ್ ಗೆ ಸವಾಲು ಹಾಕಿದ ಬಿಜೆಪಿ ರಾಜ್ಯಾಧ್ಯಕ್ಷ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿ.ಕೆ.ಶಿವಕುಮಾರ್ ಗೆ ಸವಾಲು ಹಾಕಿದ ಬಿಜೆಪಿ ರಾಜ್ಯಾಧ್ಯಕ್ಷ

ಚಿಕ್ಕಬಳ್ಳಾಪುರ: ಒಬ್ಬ ವ್ಯಕ್ತಿಯ ಪ್ರಾಣದ ಜೊತೆ ರಾಜಕೀಯ ಚೆಲ್ಲಾಟ ನಡೆಸುವುದು ಸರಿಯಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಧೈರ್ಯವಿದ್ದರೆ ವಿಡಿಯೋ ಬಿಡುಗಡೆ ಮಾಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಸವಾಲು ಹಾಕಿದ್ದಾರೆ.

ಸಿಎಂ ರಾಜಕೀಯ ಕಾರ್ಯದರ್ಶಿ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿ ಆರೋಪಕ್ಕೆ ಪ್ರತಿಕ್ರಿಯಿಸಿರುವ ನಳೀನ್ ಕುಮಾರ್, ವಿಡಿಯೋ ಇದ್ದರೆ ಬಿಡುಗಡೆ ಮಾಡಲಿ ಆದರೆ ಅನಗತ್ಯ ಆರೋಪಗಳು ಬೇಡ ಎಂದರು.

ಡಿ.ಕೆ.ಶಿವಕುಮಾರ್ ಅವರಿಗೆ ಕಾನೂನಿನ ಮೇಲೆ ಗೌರವವಿದ್ದರೆ ಮೊದಲು ಸಿಬಿಐ ತನಿಖೆಗೆ ಒಳಪಡಲಿ ಅದನ್ನು ಬಿಟ್ಟು ರಾಜಕೀಯ ನಾಟಕಗಳನ್ನು ಆಡುತ್ತಾ, ಆರೋಪ ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...