alex Certify ಡಿ.ಕೆ.ಶಿ. ಗೂಂಡಾಗಿರಿ ಮೂಲಕ ಚುನಾವಣೆ ಗೆಲ್ಲಲು ಹೊರಟಿದ್ದಾರೆ ಎಂದ ಶೋಭಾ ಕರಂದ್ಲಾಜೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿ.ಕೆ.ಶಿ. ಗೂಂಡಾಗಿರಿ ಮೂಲಕ ಚುನಾವಣೆ ಗೆಲ್ಲಲು ಹೊರಟಿದ್ದಾರೆ ಎಂದ ಶೋಭಾ ಕರಂದ್ಲಾಜೆ

ಮೈಸೂರು: ಉಪಚುನಾವಣಾ ಅಖಾಡ ರಂಗೇರಿದ್ದು, ರಾಜಕೀಯ ನಾಯಕರ ವಾಕ್ಸಮರ ಮುಂದುವರಿದಿದೆ. ಡಿ.ಕೆ.ಶಿವಕುಮಾರ್ ಅವರದ್ದು ಗೂಂಡಾ ರಾಜಕಾರಣ. ಆರ್.ಆರ್. ನಗರ ಉಪಚುನಾವಣೆಯನ್ನು ಗೂಂಡಾಗಿರಿ ಮೂಲಕ ಗೆಲ್ಲಲು ಮುಂದಾಗಿದ್ದಾರೆ. ಆದರೆ ಅದು ಸಾಧ್ಯವಿಲ್ಲ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿ. ಸಹೋದರ ಡಿ.ಕೆ. ಸುರೇಶ್ ಸಂಸದರು. ಹಾಗಾಗಿ ಆರ್.ಆರ್. ನಗರದಲ್ಲಿ ಗೂಂಡಾಗಳನ್ನು ಬಳಸಿಕೊಂಡು ಕಾನೂನು ವ್ಯವಸ್ಥೆ ಹದಗೆಡಿಸಲು ಯತ್ನಿಸಿದ್ದಾರೆ. ಕಾಂಗ್ರೆಸ್ ನಾಯಕರು ಇದೀಗ ಅಸ್ತಿತ್ವಕ್ಕಾಗಿ ಗುದ್ದಾಟ ನಡೆಸಿದ್ದಾರೆ ಎಂದು ಆರೋಪಿಸಿದರು.

ಇನ್ನು ಉಚಿತ ಕೊರೊನಾ ಲಸಿಕೆ ಘೋಷಿಸಿರುವ ಬಿಜೆಪಿ ಚುನಾವಣಾ ಪ್ರಣಾಳಿಕೆ ವಿಚಾರವಾಗಿ ಮಾತನಾಡಿದ ಶೋಭಾ ಕರಂದ್ಲಾಜೆ, ನಮ್ಮದೇ ಸರ್ಕಾರ ಇದೆ. ಹಾಗಾಗಿ ದೇಶದ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ ನೀಡುವುದು ನಮ್ಮ ಗುರಿ. ಹಾಗಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಘೋಷಣೆಯಲ್ಲಿ ತಪ್ಪಿಲ್ಲ ಎಂದು ಸಮರ್ಥಿಸಿಕೊಂಡರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...