alex Certify ತಲಕಾವೇರಿಯಲ್ಲಿ ಯುವಕರ ದುಷ್ಕೃತ್ಯ; ಭಕ್ತನ ಬೆರಳನ್ನೇ ಮುರಿದ ಕಿರಾತಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಲಕಾವೇರಿಯಲ್ಲಿ ಯುವಕರ ದುಷ್ಕೃತ್ಯ; ಭಕ್ತನ ಬೆರಳನ್ನೇ ಮುರಿದ ಕಿರಾತಕರು

ಕೊಡಗು: ಪವಿತ್ರ ಯಾತ್ರಾ ಸ್ಥಳ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ಕೇರಳ ಮೂಲದ ಯುವಕರು ಪುಂಡಾಟ ಮೆರೆದಿದ್ದಾರೆ. ಮಾಸ್ಕ್ ಹಾಕುವಂತೆ ಹೇಳಿದಕ್ಕೆ ಯುವಕರ ಗುಂಪು ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಮೇಲೆ ಹಾಗೂ ಭಕ್ತರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಮಾಸ್ಕ್ ಹಾಕದೇ ಬಂದಿದ್ದ ಕೇರಳ ಮೂಲದ ಯುವಕರ ಗುಂಪಿಗೆ ಸಮಿತಿ ಅಧ್ಯಕ್ಷ ಬಿ.ಎಸ್.ತಮ್ಮಯ್ಯ ಮಾಸ್ಕ್ ಹಾಕಿಕೊಳ್ಳುವಂತೆ ಸೂಚಿಸಿದ್ದಾರೆ. ಇದರಿಂದ ಕೋಪಗೊಂಡ ಯುವಕರು ತಮ್ಮಯ್ಯ ಮೇಲೆ ಮುಗಿಬಿದ್ದು ಹಲ್ಲೆ ನಡೆಸಿದ್ದಾರೆ. ಇದನ್ನು ತಪ್ಪಿಸಲು ಹೋದ ಭಕ್ತರೊಬ್ಬರ ಕೈ ಬೆರಳನ್ನು ಮುರಿದಿದ್ದಾರೆ.

ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು ಯುವಕರನ್ನು ವಶಕ್ಕೆ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...