alex Certify ತಲಕಾವೇರಿ: ಸರ್ಟಿಫಿಕೇಟ್ ಇದ್ದರೆ ಮಾತ್ರ ‘ತೀರ್ಥೋದ್ಭವ’ ವೀಕ್ಷಣೆಗೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಲಕಾವೇರಿ: ಸರ್ಟಿಫಿಕೇಟ್ ಇದ್ದರೆ ಮಾತ್ರ ‘ತೀರ್ಥೋದ್ಭವ’ ವೀಕ್ಷಣೆಗೆ ಅವಕಾಶ

ಮಡಿಕೇರಿ: ಜೀವನದಿ ಕಾವೇರಿ ತೀರ್ಥೋದ್ಭವ ವೀಕ್ಷಿಸಲು ಬರುವ ಭಕ್ತರು ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಿಸಿ ಸರ್ಟಿಫಿಕೇಟ್ ತರಬೇಕು. ಸರ್ಟಿಫಿಕೇಟ್ ತಂದವರಿಗೆ ಮಾತ್ರ ತಲಕಾವೇರಿ ಕ್ಷೇತ್ರಕ್ಕೆ ಬರಲು ಅವಕಾಶ ನೀಡಲಾಗುವುದು ಎಂದು ಶಾಸಕ ಕೆ.ಜಿ. ಬೋಪಯ್ಯ ತಿಳಿಸಿದ್ದಾರೆ.

ಅಕ್ಟೋಬರ್ 17ರಂದು ಪವಿತ್ರ ಕಾವೇರಿ ತೀರ್ಥೋದ್ಭವ ನಡೆಯಲಿದ್ದು, ಭಕ್ತರ ಆರೋಗ್ಯದ ದೃಷ್ಟಿಯಿಂದ ರಾಜ್ಯ, ಹೊರ ರಾಜ್ಯದಿಂದ ಬರುವ ಎಲ್ಲಾ ಭಕ್ತರಿಗೂ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ಸರ್ಟಿಫಿಕೇಟ್ ತಂದರೆ ಮಾತ್ರ ಕ್ಷೇತ್ರಕ್ಕೆ ಬರಬಹುದು. ಕ್ಷೇತ್ರದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕಾವೇರಿ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದರು.

ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ತೀರ್ಥೋದ್ಭವಕ್ಕೆ ಹೆಚ್ಚಿನ ಜನಸಂದಣಿಯಾಗದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಲಾಗುವುದು. ಸಂಪ್ರದಾಯದಂತೆ ಪೂಜಾ ವಿಧಿವಿಧಾನಗಳು, ಕ್ಷೇತ್ರದ ಪದ್ಧತಿಗೆ ಚ್ಯುತಿಬಾರದಂತೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...