alex Certify ತಾಕತ್ ಇದ್ದರೆ ಸಿಎಂ ಭ್ರಷ್ಟಾಚಾರ ಆರೋಪ ದಾಖಲೆ ಬಿಡುಗಡೆ ಮಾಡಿ: ಯತ್ನಾಳ್ ಗೆ ರೇಣುಕಾಚಾರ್ಯ ಸವಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಾಕತ್ ಇದ್ದರೆ ಸಿಎಂ ಭ್ರಷ್ಟಾಚಾರ ಆರೋಪ ದಾಖಲೆ ಬಿಡುಗಡೆ ಮಾಡಿ: ಯತ್ನಾಳ್ ಗೆ ರೇಣುಕಾಚಾರ್ಯ ಸವಾಲು

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿರುವ ಶಾಸಕ ಎಂ.ಪಿ.ರೇಣುಕಾಚಾರ್ಯ, ಹಾದಿ ಬೀದಿಲಿ ಪದೇ ಪದೇ ಸಿಎಂ ಯಡಿಯೂರಪ್ಪ ಕುಟುಂಬವನ್ನು ಟಾರ್ಗೆಟ್ ಮಾಡಿ ಮಾತನಾಡುತ್ತಿದ್ದೀರಿ. ಇನ್ನು ಮುಂದೆ ಹೀಗೆ ಮಾಡಿದರೆ ಸಹಿಸಲು ಸಾಧ್ಯವಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ವಿಧಾನಪರಿಷತ್ ಕಲಾಪದಲ್ಲಿ ಮಾತನಾಡಿದ ರೇಣುಕಾಚಾರ್ಯ, ಸಿಎಂ ಯಡಿಯೂರಪ್ಪ ಬಗ್ಗೆ ಟೀಕೆ ಮಾಡಿದರೂ ಒಂದೇ, ಪಕ್ಷದ ಉಪಾಧ್ಯಕ್ಷ ವಿಜಯೇಂದ್ರ ವಿರುದ್ಧ ಟೀಕೆ ಮಾಡಿದರೂ ಒಂದೇ. ಪಕ್ಷದ ಚೌಕಟ್ಟಿನಲ್ಲಿ ಇರುವುದನ್ನು ಯತ್ನಾಳ್ ಕಲಿತುಕೊಳ್ಳಬೇಕು ಎಂದು ಹೇಳಿದರು.

ಬಿ ಎಸ್ ವೈ ಕುಟುಂಬವನ್ನು ಟಾರ್ಗೆಟ್ ಮಾಡಿ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ದಾಖಲೆ ಏನಿದೆ? ಯತ್ನಾಳ್ ಅವರೇ ಮೊದಲು ನಾಟಕ ಮಾಡೋದನ್ನು ನಿಲ್ಲಿಸಿ. ತಾಕತ್ ಇದ್ದರೆ ದಾಖಲೆಗಳನ್ನು ಬಿಡುಗಡೆ ಮಾಡಿ. ಬಿಜೆಪಿಯನ್ನು ಕಟ್ಟಿ ಬೆಳೆಸಿದವರು ಯಡಿಯೂರಪ್ಪ. ನಿಮ್ಮಿಂದ ಹೇಳಿಸಿಕೊಳ್ಳುವ ಅಗತ್ಯ ಸಿಎಂ ಯಡಿಯೂರಪ್ಪನವರಿಗಿಲ್ಲ. ಪಂಚಮಸಾಲಿ ಸೇರಿ ಎಲ್ಲಾ ಸಮುದಾಯದವರೂ ನನಗೆ ವೋಟು ಹಾಕಿದ್ದಾರೆ. ನಾನು ವಿಜಯಪುರ ಕ್ಷೇತ್ರಕ್ಕೆ ಬಂದು ಪ್ರಚಾರ ಮಾಡುತ್ತೇನೆ. ನಿಮಗೆ ತಾಕತ್ ಇದ್ದರೆ ಹೊನ್ನಾಳಿಗೆ ಬಂದು ಪ್ರಚಾರ ಮಾಡಿ ನೋಡೋಣ ಎಂದು ಸವಾಲು ಹಾಕಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...