alex Certify ದೆಹಲಿ ದಂಡಯಾತ್ರೆಯಲ್ಲಿ ದಿಗ್ವಿಜಯ ಸಾಧಿಸಿದ ಸಿಎಂ ಯಡಿಯೂರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೆಹಲಿ ದಂಡಯಾತ್ರೆಯಲ್ಲಿ ದಿಗ್ವಿಜಯ ಸಾಧಿಸಿದ ಸಿಎಂ ಯಡಿಯೂರಪ್ಪ

ಎರಡುವರೆ ವರ್ಷ ನಾನೇ ಸಿಎಂ ಎಂದು ಪ್ರಧಾನಿ ಮೋದಿ ಬಳಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗುತ್ತಾರೆ ಎಂದು ಹೇಳುವ ಮೂಲಕ ಸಿಎಂ ಪಟ್ಟದ ಮೇಲೆ ಕಣ್ಣಿದ್ದವರ ಕನಸು ಭಗ್ನವಾಗಿದೆ ಎನ್ನಲಾಗಿದೆ.

ದೆಹಲಿಯಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮಾತನಾಡಿದ ಸಿಎಂ ಯಡಿಯೂರಪ್ಪ, ಇನ್ನೂ ಎರಡುವರೆ ವರ್ಷ ತಾನೇ ಸಿಎಂ ಆಗಿ ಮುಂದುವರೆಯುತ್ತೇನೆ. ಕರ್ನಾಟಕದಲ್ಲಿ ಮತ್ತೆ ಪಕ್ಷ ಅಧಿಕಾರಕ್ಕೆ ತರುವ ಜವಾಬ್ದಾರಿ ನನ್ನದು. ನನ್ನ ನೇತೃತ್ವದಲ್ಲೇ ಚುನಾವಣೆ ಆಗಬೇಕು. 130 ಸ್ಥಾನಗಳನ್ನು ಗೆಲ್ಲಿಸಿ ಕೊಡುತ್ತೇನೆ. ನನ್ನ ಮೇಲೆ ವಿಶ್ವಾಸವಿಡಿ. ಪಕ್ಷವನ್ನು ಅಧಿಕಾರಕ್ಕೆ ತರುವ ಜವಾಬ್ದಾರಿ ನನ್ನದು ಎಂದು ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಸ್ವಪಕ್ಷಿಯ ಶಾಸಕರು ತನ್ನ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ. ತಮ್ಮ ವಿರುದ್ಧ ಮೇಲಿಂದ ಮೇಲೆ ಷಡ್ಯಂತ್ರ ನಡೆಸಲಾಗುತ್ತಿದೆ. ವಿರೋಧ ಪಕ್ಷಗಳನ್ನು ಎದುರಿಸುತ್ತೇನೆ. ಆದರೆ ಪಕ್ಷ ವಿರೋಧಿ ಚಟುವಟಿಕೆ ಸಹಿಸಲಾಗದು ಎಂದು ದೂರನ್ನು ಕೂಡ ನೀಡಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...