alex Certify ದೇವರ ‘ದರ್ಶನ’ವಾದರೂ ಸಿಗೋಲ್ಲ ತೀರ್ಥ – ಪ್ರಸಾದ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇವರ ‘ದರ್ಶನ’ವಾದರೂ ಸಿಗೋಲ್ಲ ತೀರ್ಥ – ಪ್ರಸಾದ

ಕೊರೊನಾ ಮಹಾಮಾರಿ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಕಳೆದ ಎರಡು ತಿಂಗಳಿಗೂ ಅಧಿಕ ಕಾಲದಿಂದ ರಾಜ್ಯದ ದೇವಾಲಯಗಳು ಬಂದ್ ಆಗಿವೆ. ನಾಲ್ಕನೆಯ ಹಂತದ ಲಾಕ್ಡೌನ್ ಜಾರಿ ಸಂದರ್ಭದಲ್ಲಿ ಬಹಳಷ್ಟು ಸಡಿಲಿಕೆಗಳನ್ನು ಮಾಡಿದ್ದರೂ ಸಹ ಧಾರ್ಮಿಕ ಮಂದಿರಗಳನ್ನು ತೆರೆಯಲು ಅನುಮತಿ ನೀಡಿರಲಿಲ್ಲ.

ನಾಲ್ಕನೇ ಹಂತದ ಲಾಕ್ಡೌನ್ ಮೇ 31ಕ್ಕೆ ಅಂತ್ಯಗೊಳ್ಳಲಿದ್ದು, ಹಲವು ನಿರ್ಬಂಧಗಳೊಂದಿಗೆ ಜೂನ್ 1 ರಿಂದ ದೇವಾಲಯಗಳನ್ನು ತೆರೆಯಲು ಅನುಮತಿ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ದೇವರ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, ದೇವಾಲಯಗಳಲ್ಲಿ ಸ್ಯಾನಿಟೈಸರ್ ಬಳಕೆ ಮಾಡಬೇಕಾಗುತ್ತದೆ. ಅಲ್ಲದೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಗಮನ ವಹಿಸಬೇಕಾಗುತ್ತದೆ.

ಜೊತೆಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಿಕೊಡಲು ತೀರ್ಮಾನಿಸಲಾಗಿದೆ ಎನ್ನಲಾಗಿದ್ದು, ಸದ್ಯಕ್ಕೆ ತೀರ್ಥ – ಪ್ರಸಾದ ವಿತರಿಸದಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ. ಅಲ್ಲದೆ ಭಕ್ತರು ತಮ್ಮೊಂದಿಗೆ ಹೂವು, ಹಣ್ಣು, ಕಾಯಿ ತೆಗೆದುಕೊಂಡು ಹೋಗದಂತೆ ಕ್ರಮ ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ. ಜೊತೆಗೆ ಧರ್ಮಸ್ಥಳ, ಸುಬ್ರಹ್ಮಣ್ಯ ಸೇರಿದಂತೆ ಕೆಲ ಧಾರ್ಮಿಕ ಸ್ಥಳಗಳಲ್ಲಿ ಸದ್ಯಕ್ಕೆ ವಸತಿ ವ್ಯವಸ್ಥೆ ಕಲ್ಪಿಸಲಾಗುವುದಿಲ್ಲ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...