alex Certify ದೊಣ್ಣೆ ಹಿಡಿದು ನಡುರಸ್ತೆಯಲ್ಲೇ ಬಡಿದಾಡಿಕೊಂಡ ನಾರಿಯರು…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೊಣ್ಣೆ ಹಿಡಿದು ನಡುರಸ್ತೆಯಲ್ಲೇ ಬಡಿದಾಡಿಕೊಂಡ ನಾರಿಯರು…!

ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಈ ಚುನಾವಣೆಯಲ್ಲಿ ಗೆದ್ದ ಹಾಗೂ ಸೋತ ಅಭ್ಯರ್ಥಿಗಳ ಕುಟುಂಬದ ಮಹಿಳೆಯರು ದೊಣ್ಣೆ ಹಿಡಿದು ನಡುರಸ್ತೆಯಲ್ಲೇ ಬಡಿದಾಡಿ ಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ತುಕ್ಕಾನಟ್ಟಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಾಲ್ಕನೇ ವಾರ್ಡಿನಲ್ಲಿ ಕಣಕ್ಕಿಳಿದಿದ್ದ ಸುನಂದಾ ಯಮನಪ್ಪ ಭಜಂತ್ರಿ ಎಂಬವರು ಜಯಗಳಿಸಿದ್ದು, ಇವರ ವಿರುದ್ಧ ಕಣಕ್ಕಿಳಿದಿದ್ದ ಸುರೇಖಾ ಭೀಮಶಿ ಕಂಕನವಾಡಿ ಪರಾಭವಗೊಂಡಿದ್ದರು. ಈ ಇಬ್ಬರು ಅಭ್ಯರ್ಥಿಗಳು ಒಂದೇ ರಸ್ತೆಯ ನಿವಾಸಿಗಳು ಎನ್ನಲಾಗಿದೆ.

ಸೋಮವಾರದಂದು ಕ್ಷುಲ್ಲಕ ಕಾರಣಕ್ಕೆ ಗೆದ್ದ ಹಾಗೂ ಸೋತ ಅಭ್ಯರ್ಥಿಗಳ ಕುಟುಂಬದ ಮಹಿಳೆಯರು ದೊಣ್ಣೆ ಹಿಡಿದು ಹೊಡೆದಾಟಕ್ಕಿಳಿದಿದ್ದು, ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯೆ ಸುನಂದಾ ಭಜಂತ್ರಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಜೊತೆಗೆ ಎದುರಾಳಿ ಗುಂಪಿನ ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಗಲಾಟೆ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಘಟಪ್ರಭಾ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...