alex Certify ಧರಣಿನಿರತ ಉಪನ್ಯಾಸಕರಿಗೆ‌ ಶಿಕ್ಷಣ ಸಚಿವರಿಂದ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಧರಣಿನಿರತ ಉಪನ್ಯಾಸಕರಿಗೆ‌ ಶಿಕ್ಷಣ ಸಚಿವರಿಂದ ಸಿಹಿ ಸುದ್ದಿ

ಬೆಂಗಳೂರು: ಪಿಯು ಉಪನ್ಯಾಸಕರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಕಾಲೇಜು ಆರಂಭವಾಗುವ ತಕ್ಷಣ ನೇಮಕಾತಿ ಆದೇಶ ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಭರವಸೆ ನೀಡಿದ್ದಾರೆ.

ಉಪನ್ಯಾಸಕರಾಗಿ ಆಯ್ಕೆಯಾಗಿ ಒಂದು ವರ್ಷವಾದರೂ ಇನ್ನೂ ಸರ್ಕಾರದಿಂದ ನೇಮಕಾತಿ ಆದೇಶ ದೊರೆಯದ ಹಿನ್ನೆಲೆಯಲ್ಲಿ ಆತಂಕಕ್ಕೀಡಾಗಿರುವ ಪಿಯು ಉಪನ್ಯಾಸಕರು ಧರಣಿ ಆರಂಭಿಸಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿರುವ ಸಚಿವರು, ಉಪನ್ಯಾಸಕರ ಹುದ್ದೆಗಳಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ತಿದ್ದುಪಡಿ ಮಾಡಲು ಸಿದ್ಧ. ಉಪನ್ಯಾಸಕರು ಆತಂಕಗೊಳ್ಳುವ ಅಗತ್ಯವಿಲ್ಲ ಎಂದಿದ್ದಾರೆ.

2015ರಿಂದ ವಿಳಂಬವಾಗುತ್ತಿದ್ದ ಉಪನ್ಯಾಸಕರ ಪರೀಕ್ಷೆ ಫಲಿತಾಂಶ ಪ್ರಕಟ ಮಾಡುವಂತೆ ಕ್ರಮ ಕೈಗೊಂಡ ನಂತರ ಈ ವಿಚಾರ ಹಲವು ಅಡೆತಡೆಗಳನ್ನು ಎದುರಿಸಿತು. ನನ್ನ ಪ್ರತಿ ಪ್ರಯತ್ನ ನೂತನ ಉಪನ್ಯಾಸಕರಿಗೆ ತಿಳಿದಿದೆ. ಆರ್ಥಿಕ ಇಲಾಖೆ ನಿರ್ಬಂಧ ಇದ್ದರೂ ಕೂಡ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಕೂಡ ಪೂರ್ಣಗೊಳಿಸಲಾಗಿದೆ. ಈಗ ಕಾಲೇಜುಗಳು ಆರಂಭವಾದ ತಕ್ಷಣ ನೇಮಕಾತಿ ಆದೇಶ ಕೊಡಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...