alex Certify ಧಾರಾಕಾರ ಮಳೆಗೆ ಮಾಜಿ ಸಚಿವರ ಮನೆಯೇ ಜಲಾವೃತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಧಾರಾಕಾರ ಮಳೆಗೆ ಮಾಜಿ ಸಚಿವರ ಮನೆಯೇ ಜಲಾವೃತ

ಕರಾವಳಿ ಜಿಲ್ಲೆ ಉಡುಪಿಯಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಹಳ್ಳ-ಕೊಳ್ಳಗಳು, ನದಿಗಳು ಉಕ್ಕಿ ಹರಿಯುತ್ತಿವೆ. ಹಲವು ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದ್ದು, ಜನತೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇದರ ಮಧ್ಯೆ ಉಡುಪಿಯಲ್ಲಿರುವ ಮಾಜಿ ಸಚಿವ ದಿವಂಗತ ವಸಂತ ವಿ ಸಾಲಿಯಾನ ಅವರ ನಿವಾಸವೂ ಜಲಾವೃತವಾಗಿದ್ದು, ಕುಟುಂಬ ಸದಸ್ಯರು ಮೊದಲ ಮಹಡಿಯಲ್ಲಿ ಕುಳಿತು ಪ್ರವಾಹ ಇಳಿಮುಖವಾಗುವ ನಿರೀಕ್ಷೆಯಲ್ಲಿದ್ದಾರೆ.

ಮನೆ ಸಮೀಪವೇ ಇರುವ ತೋಟ ಹಾಗೂ ಫಾರ್ಮ್‌ ಹೌಸ್‌ ಕೂಡಾ ನೀರಿನಲ್ಲಿ ಮುಳುಗಿದ್ದು, ಪ್ರವಾಹ ಪರಿಸ್ಥಿತಿ ಶ್ರೀ ಸಾಮಾನ್ಯರ ಜೊತೆಗೆ ರಾಜಕಾರಣಿಗಳು, ಉದ್ಯಮಿಗಳಿಗೂ ಬಿಸಿ ಮುಟ್ಟಿಸುತ್ತಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...