alex Certify ನನ್ನ ಭಾವನೆಗೆ ಕಾಂಗ್ರೆಸ್ ಸೂಕ್ತ ವೇದಿಕೆ ಎಂದ ಮಧು ಬಂಗಾರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನನ್ನ ಭಾವನೆಗೆ ಕಾಂಗ್ರೆಸ್ ಸೂಕ್ತ ವೇದಿಕೆ ಎಂದ ಮಧು ಬಂಗಾರಪ್ಪ

ಬೆಂಗಳೂರು: ಜೆಡಿಎಸ್ ನಲ್ಲಿ ನನ್ನ ಭಾವನೆಗಳಿಗೆ ಬೆಲೆ ಇರಲಿಲ್ಲ. ನನ್ನ ಭಾವನೆಗೆ ಕಾಂಗ್ರೆಸ್ ಸೂಕ್ತ ವೇದಿಕೆಯಾಗಿದ್ದು, ಏಪ್ರಿಲ್ ನಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದೇನೆ ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲು ನಿರ್ಧರಿಸಿರುವ ಮಧು ಬಂಗಾರಪ್ಪ, ಇಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಕರ್ನಾಟಕಕ್ಕೆ ಮತ್ತೆ ಕಾದಿದೆಯಾ ಕೊರೊನಾ ಗಂಡಾಂತರ…..! ಆತಂಕ ವ್ಯಕ್ತಪಡಿಸಿದ ಸಚಿವ ಸುಧಾಕರ್

ಈ ವೇಳೆ ಮಾತನಾಡಿದ ಅವರು, ಕುಮಾರಸ್ವಾಮಿಯವರ ಮೇಲೆ ನನಗೆ ಅಪಾರ ಗೌರವವಿದೆ. ಜೆಡಿಎಸ್ ನಲ್ಲಿ ಅಧಿಕಾರ ಅನುಭವಿಸಿ ಈಗ ಕಾಂಗ್ರೆಸ್ ನತ್ತ ಮುಖಮಾಡಿದ್ದಾರೆ ಎಂಬ ಅವರ ಆರೋಪದಲ್ಲಿ ಹುರುಳಿಲ್ಲ. ಜೆಡಿಎಸ್ ನಲ್ಲಿ ನಾನು ಯಾವುದೇ ಅಧಿಕಾರವನ್ನೂ ಅನುಭವಿಸಿಲ್ಲ ಎಂದರು.

ನಾನು ಎಲ್ಲಿಯೇ ಇದ್ದರೂ ದೇವೇಗೌಡರು, ಕುಮಾರಸ್ವಾಮಿಯವರನ್ನು ಗೌರವಿಸುತ್ತೇನೆ. ಅವರು ರಾಜಕೀಯದಲ್ಲಿ ಹಿರಿಯರು. ಮಧು ಬಂಗಾರಪ್ಪ ವೈಯಕ್ತಿಕವಾಗಿ ಬದಲಾಗಲ್ಲ, ಪಕ್ಷ ಬದಲಾಯಿಸುತ್ತಿದ್ದಾರೆ. ಹೊಸ ಪಕ್ಷ ಹೊಸ ಅವಕಾಶ ಸಿಕ್ಕಿದೆ ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Только гении могут найти жук Необычайная головоломка: находя 3 различия за 9 секунд, можно найти Коллекция для смелых и твердых: в поисках меча гладиатора