alex Certify ನಮ್ಮ ಸಂಸದರಿಗೆ ತಾಕತ್ತಿದ್ದರೆ ಪ್ರಧಾನಿ ಮೋದಿ ಜೊತೆ ಒಂದು ಫೋಟೋ ತೆಗೆಸಿಕೊಳ್ಳಲಿ; ಮಾಜಿ ಸಚಿವ ತಂಗಡಗಿ ಸವಾಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಮ್ಮ ಸಂಸದರಿಗೆ ತಾಕತ್ತಿದ್ದರೆ ಪ್ರಧಾನಿ ಮೋದಿ ಜೊತೆ ಒಂದು ಫೋಟೋ ತೆಗೆಸಿಕೊಳ್ಳಲಿ; ಮಾಜಿ ಸಚಿವ ತಂಗಡಗಿ ಸವಾಲ್

ಕೊಪ್ಪಳ: ನಮ್ಮ ದೇಶವನ್ನು ಆಳುತ್ತಿರುವವರು ಇಬ್ಬರು ಗುಜರಾತಿಗಳು ಎಂದು ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಚಿವ ಶಿವರಾಜ್ ತಂಗಡಗಿ, ಮೋದಿ ಹಾಗೂ ಅಮಿತ್ ಶಾ ನಮ್ಮ ದೇಶವನ್ನು ಮಾರುತ್ತಿದ್ದಾರೆ. ಅಂಬಾನಿ, ಅದಾನಿ ಇಡೀ ದೇಶವನ್ನೇ ಖರೀದಿ ಮಾಡುತ್ತಿದ್ದಾರೆ ಎಂದು ಗುಡುಗಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರಿಗೆ ಕರ್ನಾಟಕದ ಸಂಸದರೆಂದರೆ ನಿರ್ಲಕ್ಷ. ನಮ್ಮ ಸಂಸದರಿಗೆ ತಾಕತ್ತಿದ್ದರೆ ಮೋದಿ ಜೊತೆ ನಿಂತು ಒಂದು ಫೋಟೋ ತೆಗೆಸಿಕೊಳ್ಳಲಿ. ಮೋದಿ ಇವರನ್ನು ಹತ್ತಿರಕ್ಕೂ ಬಿಟ್ಟುಕೊಳ್ಳಲ್ಲ, 200 ಮೀಟರ್ ದೂರ ನಿಲ್ಲಿಸುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದೇ ವೇಳೆ ಪೆಟ್ರೋಲ್, ಡೀಸೆಲ್ ದರ ಗಗನಮುಖಿಯಾಗುತ್ತಿರುವ ಬಗ್ಗೆ ಕಿಡಿಕಾರಿದ ತಂಗಡಗಿ, ಇನ್ಮುಂದೆ ಮೋದಿ ಎಂದರೆ ಪೆಟ್ರೋಲ್, ಡೀಸೆಲ್ ಎಂದು ಕರೆಯಬೇಕು, ಬರಿ ಸುಳ್ಳುಗಾರ ಎಂದು ಕರೆಯಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...