alex Certify ನಾಗಮಂಗಲಕ್ಕೆ ಕಾಲಿಟ್ಟ ಕೊರೊನಾ: ರಾಜ್ಯದಲ್ಲಿ 511ಕ್ಕೇರಿದ ಸೋಂಕಿತರ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಗಮಂಗಲಕ್ಕೆ ಕಾಲಿಟ್ಟ ಕೊರೊನಾ: ರಾಜ್ಯದಲ್ಲಿ 511ಕ್ಕೇರಿದ ಸೋಂಕಿತರ ಸಂಖ್ಯೆ

ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 511ಕ್ಕೇರಿದೆ. ಆರೋಗ್ಯ ಇಲಾಖೆ ನೀಡಿದ ಮಾಹಿತಿ ಪ್ರಕಾರ ಇಂದು 8 ಹೊಸ ಪ್ರಕರಣ ಬೆಳಕಿಗೆ ಬಂದಿದೆ. ಮಂಡ್ಯದ ನಾಗಮಂಗಲದಲ್ಲಿ ಮೊದಲ ಪ್ರಕರಣ ಬೆಳಕಿಗೆ ಬಂದಿದೆ. 50 ವರ್ಷದ ವ್ಯಕ್ತಿಗೆ ಸೋಂಕು ಕಾಣಿಸಿಕೊಂಡಿದೆ. ಆತ ಮುಂಬೈಗೆ ಹೋಗಿ ಬಂದಿದ್ದ ಎನ್ನಲಾಗಿದೆ. ಆತನ ಸಂಪರ್ಕದಲ್ಲಿರುವವರೆಲ್ಲರನ್ನೂ ಕ್ವಾರಂಟೈನ್ ಮಾಡಲಾಗಿದೆ.

ಇನ್ನು ದಕ್ಷಿಣ ಕನ್ನಡದಲ್ಲಿ ಇಂದು 2 ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನಲ್ಲಿ ಒಂದು ಹೊಸ ಪ್ರಕರಣ ಬೆಳಕಿಗೆ ಬಂದಿದೆ. ಬಾಗಲಕೋಟೆಯಲ್ಲಿ 2 ಪ್ರಕರಣ ಹಾಗೂ ವಿಜಯಪುರದಲ್ಲಿ ಎರಡು ಪ್ರಕರಣ ಬೆಳಕಿಗೆ ಬಂದಿದೆ.

ಕಳೆದ ನಾಲ್ಕೈದು ದಿನಗಳಿಂದ ಇಡೀ ಬೆಂಗಳೂರನ್ನು ಬೆಚ್ಚಿ ಬೀಳಿಸಿದ್ದ ಪಾದರಾಯನಪುರ ಹಾಗೂ ಹೊಂಗಸಂದ್ರದಲ್ಲಿ ಇಂದು ಈವರೆಗೆ ಯಾವುದೇ ಹೊಸ ಪ್ರಕರಣ ಬೆಳಕಿಗೆ ಬಂದಿಲ್ಲ. ಬೆಂಗಳೂರಿನಲ್ಲಿ ಒಂದು ಪ್ರಕರಣ ಮಾತ್ರ ಬೆಳಕಿಗೆ ಬಂದಿದೆ. 13 ವರ್ಷದ ಬಾಲಕನಿಗೆ ಇಂದು ಸೋಂಕು ಕಾಣಿಸಿಕೊಂದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...