alex Certify ನಾನು ರಾಜಕೀಯದಲ್ಲಿ ಈಗಷ್ಟೇ ಅಂಬೇಗಾಲಿಡುತ್ತಿದ್ದೇನೆ: ಸಚಿವ ಸೋಮಶೇಖರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾನು ರಾಜಕೀಯದಲ್ಲಿ ಈಗಷ್ಟೇ ಅಂಬೇಗಾಲಿಡುತ್ತಿದ್ದೇನೆ: ಸಚಿವ ಸೋಮಶೇಖರ್

ಮೈಸೂರು: ನಾನು ಕಾಂಗ್ರೆಸ್ ನಲ್ಲಿದ್ದಾಗ ಆ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದೆ. ಈಗ ಆ ಪಕ್ಷದಲ್ಲಿ ನಾನಿಲ್ಲ. ಸಿದ್ದರಾಮಯ್ಯ ಅವರ ಟೀಂ ಕೂಡ ನಾನಾಗಿರಲಿಲ್ಲ ನಾನು ಅಮಾಯಕ, ಮುಗ್ಧ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸೋಮಶೇಖರ್, ಮಾಜಿ ಸಿಎಂಗಳಾದ ಹೆಚ್.ಡಿ.ಕುಮಾರಸ್ವಾಮಿ ನಡುವಿನ ಆರೋಪ ಪ್ರತ್ಯಾರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿ, ಸಿದ್ದರಾಮಯ್ಯ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಇಬ್ಬರೂ ಸಿಎಂ ಸ್ಥಾನ ಅನುಭವಿಸಿದವರು. ನಾನು ಈಗಷ್ಟೇ ರಾಜಕೀಯದಲ್ಲಿ ಅಂಬೆಗಾಲಿಡುತ್ತಿದ್ದೇನೆ. ಹಾಗಾಗಿ ಅವರ ಬಗ್ಗೆ ನಾನ್ಯಾಕೆ ಹೇಳಲಿ ಎಂದರು.

ಒಂದು ವಿಚಾರವೆಂದರೆ ಸತ್ಯವೇನೆಂಬುದು ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರಿಬ್ಬರಿಗೆ ಮಾತ್ರ ಗೊತ್ತು. ಆದರೆ ಇಬ್ಬರೂ ಸತ್ಯ ಹೇಳುತ್ತಿಲ್ಲ. ಎಲ್ಲವೂ ಮುಗಿದ ಅಧ್ಯಾಯ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...