alex Certify ನಾನು ಲಂಚ ಕೇಳಿಲ್ಲ – ಬೇಕಾದರೆ ಆಣೆ ಮಾಡೋದಿಕ್ಕೂ ರೆಡಿ ಎಂದ ಅಬಕಾರಿ ಸಚಿವ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾನು ಲಂಚ ಕೇಳಿಲ್ಲ – ಬೇಕಾದರೆ ಆಣೆ ಮಾಡೋದಿಕ್ಕೂ ರೆಡಿ ಎಂದ ಅಬಕಾರಿ ಸಚಿವ..!

ಅಬಕಾರಿ ಸಚಿವ ನಾಗೇಶ್ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ. ಈ ಕುರಿತಂತೆ ಇಂದು ಹೆಚ್.ನಾಗೇಶ್ ಸುದ್ದಿಗೋಷ್ಟಿ ನಡೆಸಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನನ್ನ ವಿರುದ್ಧ ಆಧಾರ ರಹಿತ ಆರೋಪ ಕೇಳಿ ಬಂದಿದೆ. ನನ್ನ ಮೇಲೆ ಆರೋಪ ಮಾಡಿದವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುತ್ತೇನೆ. ಅವರ ಮೇಲೆ ನಾನು ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಎಂದಿದ್ದಾರೆ.

ಹೌದು, ಮೋಹನ್ ಕುಮಾರ್ ಹಾಗೂ ಅವರ ಪುತ್ರಿ ಸ್ನೇಹ ಎಂಬುವವರು ಇಂಹದೊಂದು ಆರೋಪ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರೋ ಹೆಚ್. ನಾಗೇಶ್, ಅಬಕಾರಿ ಇಲಾಖೆಯಲ್ಲಿ ಮೋಹನ್ ಕುಮಾರ್ ಭ್ರಷ್ಟಾಚಾರಿಯಾಗಿದ್ದಾರೆ. ದುರುದ್ದೇಶದಿಂದ ನನ್ನ ಮೇಲೆ ಮೋಹನ್ ಕುಮಾರ್ ಪುತ್ರಿ ಸ್ನೇಹ ಆರೋಪ ಮಾಡುತ್ತಿದ್ದಾರೆ. ನಾನು ಎಸ್‌ಸಿ ಸಮುದಾಯವನು ಎಂಬ ಕಾರಣಕ್ಕೆ ಹೀಗೆಲ್ಲಾ ಮಾಡುತ್ತಿದ್ದಾರೆ. ನನ್ನನ್ನ
ಹೆದರಿಸಲು, ಬ್ಲಾಕ್ ಮೇಲ್ ಮಾಡಲು ಪ್ರಯತ್ನ ನಡೆಯುತ್ತಿವೆ ಎಂದಿದ್ದಾರೆ.

ಇನ್ನು ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ಮಾಡಲಾಗುತ್ತಿದೆ. ಅಧಿಕಾರಿ ಮೋಹನ್ ಕುಮಾರ್ ಮೆಂಟಲ್ ಇಂಬ್ಯಾಲೆನ್ಸ್ ಇದ್ದಾರೆ. ಅದಕ್ಕೆ ಹೀಗೆಲ್ಲ ಮಾತನಾಡುತ್ತಿದ್ದಾರೆ. ನಾನು ಭ್ರಷ್ಟಾಚಾರಿ ಅಲ್ಲ. ನಾನು ಯಾವುದೇ ಲಂಚ ತೆಗೆದುಕೊಂಡಿಲ್ಲ. ನಾನು ಎಲ್ಲಿ ಬೇಕಾದರೂ ಬಂದು ಪ್ರಮಾಣ ಮಾಡುತ್ತೇನೆ. ಧರ್ಮಸ್ಥಳ ಇರಬಹುದು ಅಥವಾ ಬೇರೆ ಯಾವುದೇ ದೇವಸ್ಥಾನ ಇರಬಹುದು. ಅಲ್ಲಿಗೆ ಬಂದು ಪ್ರಮಾಣ ಮಾಡುತ್ತೇನೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...