alex Certify ನಾನು ಸಚಿವ ಸ್ಥಾನಕ್ಕಾಗಿ ಬ್ಲಾಕ್ ಮೇಲ್ ಮಾಡುವವನಲ್ಲ ಎಂದ ಶಾಸಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾನು ಸಚಿವ ಸ್ಥಾನಕ್ಕಾಗಿ ಬ್ಲಾಕ್ ಮೇಲ್ ಮಾಡುವವನಲ್ಲ ಎಂದ ಶಾಸಕ

ಬೆಂಗಳೂರು: ಸಚಿವ ಸ್ಥಾನಕ್ಕಾಗಿ ಭಾರೀ ಲಾಬಿ ಆರಂಭವಾಗಿದ್ದು, ರಾಜ್ಯದ ಕೆಲ ನಾಯಕರು ದೆಹಲಿಯತ್ತ ಪ್ರಯಾಣ ಮಾಡಿದ್ದಾರೆ. ಈ ನಡುವೆ ನಾನು ಸಚಿವ ಸ್ಥಾನಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಲ್ಲ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ನನಗೆ ಸಚಿವ ಸ್ಥಾನ ನೀಡಬೇಕು ಎಂದು ನಾನು ಬೇಡಿಕೆ ಇಟ್ಟಿಲ್ಲ. ಸಚಿವ ಸ್ಥಾನಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಲ್ಲ. ಶಾಸಕರೆಲ್ಲ ಸಭೆ ಸೇರಿದ ಮಾತ್ರಕ್ಕೆ ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಡಲು ಯೋಜನೆ ಎಂದು ಬಿಂಬಿಸುವುದು ಬೇಡ ಎಂದರು.

ನಮ್ಮ ಮನೆಯಲ್ಲಿಯೂ ಶಾಸಕರೆಲ್ಲ ಸೇರುತ್ತೇವೆ. ರಮೇಶ್ ಜಾರಕಿಹೊಳಿ ನಿವಾಸದಲ್ಲೂ ಸಭೆ ಸೇರುತ್ತೇವೆ. ಹಾಗೆಂದ ಮಾತ್ರಕ್ಕೆ ಗುಂಪುಗಾರಿಕೆಗಾಗಿ ಸಭೆ ಸೇರುತ್ತೇವೆ ಎಂದು ತಪ್ಪಾಗಿ ಅರ್ಥೈಸುವುದು ಬೇಡ. ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ 17 ಜನರಿಗೆ ಸ್ಥಾನ ನೀಡುವುದರ ಬಗ್ಗೆ ನಾನೇನೂ ಪ್ರಶ್ನೆ ಮಾಡಿಲ್ಲ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...