alex Certify ನಾನು ಹೇಳಬೇಕಾದರೆ ನೂರು ಬಾರಿ ಲೆಕ್ಕ ಹಾಕಿ ಹೇಳ್ತೇನೆ: ನನ್ನ ಮಾತು ಸುಳ್ಳಾಗಿಲ್ಲ ಎಂದ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾನು ಹೇಳಬೇಕಾದರೆ ನೂರು ಬಾರಿ ಲೆಕ್ಕ ಹಾಕಿ ಹೇಳ್ತೇನೆ: ನನ್ನ ಮಾತು ಸುಳ್ಳಾಗಿಲ್ಲ ಎಂದ ಸಿಎಂ

ಬೆಂಗಳೂರು: ಶಿರಾ ಹಾಗೂ ಆರ್.ಆರ್.ನಗರ ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ನ.10ರಂದು ಉಪಚುನಾವಣಾ ಫಲಿತಾಂಶ ಹೊರ ಬೀಳಲಿದೆ. ಎರಡೂ ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ನಿಶ್ಚಿತ. ನಾನು ಹೇಳಬೇಕಾದರೆ ನೂರು ಬಾರಿ ಲೆಕ್ಕ ಹಾಕಿ ಹೇಳುತ್ತೇನೆ. ಇದುವರೆಗೂ ನಾನು ಹೇಳಿದ್ದು ಸುಳ್ಳಾಗಿಲ್ಲ ಎಂದರು.

ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಸಿಎಂ ಯಡಿಯೂರಪ್ಪ, ಎರಡೂ ಕ್ಷೇತ್ರದ ಬೈ ಎಲೆಕ್ಷನ್ ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ. ಫಲಿತಾಂಶದ ಬಳಿಕ ವರಿಷ್ಠರ ಜೊತೆ ದೂರವಾಣಿ ಮೂಲಕ ಮಾತನಾಡುತ್ತೇನೆ. ಅಗತ್ಯವಿದ್ದರೆ ನವೆಂಬರ್ 11ರಂದು ದೆಹಲಿಗೆ ಹೋಗಿ ಬರುತ್ತೇನೆ. ಉಪ ಚುನಾವಣೆ ಫಲಿತಾಂಶದ ಬಳಿಕ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...