alex Certify ನಾನೊಬ್ಬ ನುರಿತ ರಾಜಕಾರಣಿ…..ಮಂತ್ರಿ ಆಗೇ ಆಗ್ತೀನಿ ಎಂದ ಶಾಸಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾನೊಬ್ಬ ನುರಿತ ರಾಜಕಾರಣಿ…..ಮಂತ್ರಿ ಆಗೇ ಆಗ್ತೀನಿ ಎಂದ ಶಾಸಕ

ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನನ್ನನ್ನು ಮಂತ್ರಿ ಮಾಡೇ ಮಾಡ್ತಾರೆ. ಈ ಬಾರಿ ನಾನು ಸಚಿವನಾಗುವ ವಿಶ್ವಾಸವಿದೆ ಎಂದು ಶಾಸಕ ಉಮೇಶ್ ಕತ್ತಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಉಮೇಶ್ ಕತ್ತಿ, ಸಂಪುಟ ವಿಸ್ತರಣೆ ವೇಳೆ ನನಗೂ ಸಚಿವ ಸ್ಥಾನ ನೀಡುವ ಭರವಸೆಯಿದೆ. ನಾನೊಬ್ಬ ನುರಿತ ರಾಜಕಾರಣಿ. 8 ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಹೀಗಾಗಿ ಬಿಎಸ್ ವೈ ನನಗೆ ಮಂತ್ರಿ ಸ್ಥಾನ ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಸಚಿವ ಸ್ಥಾನಕ್ಕಾಗಿ ನಾನು ಯಾರೊಬ್ಬರ ಬೆನ್ನು ಹತ್ತಿ ಹೋಗಲ್ಲ. ಸಚಿವ ಸ್ಥಾನ ನೀಡಿದರೆ ಕೆಲಸ ಮಾಡಿ ತೋರಿಸುತ್ತೇನೆ. ಇಲ್ಲವಾದಲ್ಲಿ ಶಾಸಕನಾಗೇ ಮುಂದುವರೆಯುತ್ತೇನೆ. ಯಾವುದನ್ನೂ ಮನಸ್ಸಿಗೆ ಹಚ್ಚಿಕೊಳ್ಳದೇ ಕೆಲಸ ಮಾಡುತ್ತೇನೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...