alex Certify ‘ಟ್ವಿಟ್ಟರ್’ ನಲ್ಲಿ ಪ್ರತ್ಯಕ್ಷರಾದ ಶಾಸಕ ಜಮೀರ್ ಅಹಮದ್ ಹೇಳಿದ್ದೇನು…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಟ್ವಿಟ್ಟರ್’ ನಲ್ಲಿ ಪ್ರತ್ಯಕ್ಷರಾದ ಶಾಸಕ ಜಮೀರ್ ಅಹಮದ್ ಹೇಳಿದ್ದೇನು…?

ಶಾಸಕ ಜಮೀರ್ ಅಹಮದ್ ಪ್ರತಿನಿಧಿಸುವ ಚಾಮರಾಜಪೇಟೆ ಕ್ಷೇತ್ರಕ್ಕೆ ಸೇರುವ ಪಾದರಾಯನಪುರದಲ್ಲಿ ಕಳೆದ ರಾತ್ರಿ ದುಷ್ಕರ್ಮಿಗಳು ಕರೋನಾ ಸೋಂಕಿತ ಶಂಕಿತರನ್ನು ಕ್ವಾರಂಟೈನ್ ಗಾಗಿ ಕರೆ ತರಲು ಹೋಗಿದ್ದ ಬಿಬಿಎಂಪಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು.

ಕ್ವಾರಂಟೈನ್ ಗೆ ಬರಲು ನಿರಾಕರಿಸಿದ್ದಲ್ಲದೇ ಸ್ಥಳೀಯ ಶಾಸಕ ಜಮೀರ್ ಅಹಮದ್ ಬಂದು ಹೇಳಿದ ಬಳಿಕವೇ ಬರುವುದಾಗಿ ತಿಳಿಸಿದ್ದರು. ಈ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆದಿದ್ದು, ಅಂತಿಮವಾಗಿ ದುಷ್ಕರ್ಮಿಗಳು ಬಿಬಿಎಂಪಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿದ್ದರು.

ಇಷ್ಟೆಲ್ಲಾ ಬೆಳವಣಿಗೆಗಳ ನಡೆದರೂ ಕ್ಷೇತ್ರದ ಶಾಸಕ ಜಮೀರ್ ಅಹಮದ್ ಸ್ಥಳಕ್ಕೆ ಭೇಟಿ ನೀಡಿರಲಿಲ್ಲ. ಅಲ್ಲದೆ ಅವರು ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಇದರ ಮಧ್ಯೆ ಇಂಗ್ಲಿಷ್ನಲ್ಲಿ ಅವರು ಟ್ವೀಟ್ ಮಾಡಿದ್ದರು. ಇದೀಗ ಜಮೀರ್ ಅಹಮದ್ ಟ್ವಿಟ್ಟರ್ನಲ್ಲಿ ಮತ್ತೆ ಪ್ರತ್ಯಕ್ಷರಾಗಿದ್ದು, ‘ನಿನ್ನೆ ಪಾದರಾಯನಪುರ ಬಡಾವಣೆಯಲ್ಲಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಮೇಲೆ ಸ್ಥಳೀಯ ನಿವಾಸಿಗಳು ಹಲ್ಲೆಗೆ ಯತ್ನಿಸಿರುವುದು ದುಃಖಕರ. ಸರ್ಕಾರ, ವೈದ್ಯಕೀಯ ಸಿಬ್ಬಂದಿಗಳು ಹಾಗೂ ಪೊಲೀಸ್ ಇಲಾಖೆ ಹಗಲಿರುಳು ಶ್ರಮಿಸುತ್ತಿರುವುದು ನಿಮ್ಮ ಕ್ಷೇಮಕ್ಕಾಗಿ. ಅವರೊಂದಿಗೆ ಸಹಕರಿಸಿ ಶಾಂತಿ ಕಾಪಾಡುವಂತೆ ಮನವಿ ಮಾಡುತ್ತೇನೆ’ ಎಂದು ತಿಳಿಸಿದ್ದಾರೆ.

— B Z Zameer Ahmed Khan (@BZZameerAhmedK) April 20, 2020

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...