ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕೆ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿದೆ. ಮೇ 3ರವರೆಗೆ ಲಾಕ್ ಡೌನ್ ಜಾರಿಯಲ್ಲಿದೆ. ಆದ್ರೆ ಜನರಿಗೆ ಮಾತ್ರ ಬುದ್ದಿ ಬಂದಂತೆ ಕಾಣ್ತಿಲ್ಲ. ಹಾಲು, ತರಕಾರಿ ಸೇರಿದಂತೆ ಒಂದೊಂದು ನೆಪ ಹೇಳಿಕೊಂಡು ಜನರು ಬೀದಿಗೆ ಬರ್ತಿದ್ದಾರೆ. ಹೀಗೆ ಆದಲ್ಲಿ ಮೇ 3ರ ನಂತ್ರವೂ ಲಾಕ್ ಡೌನ್ ಮುಂದುವರೆಯುವ ಸಾಧ್ಯತೆ ದಟ್ಟವಾಗಿದೆ.
ಸರ್ಕಾರ, ವೈದ್ಯರು, ಸಂಘಟನೆಗಳು ಕೊರೊನಾ ನಿಯಂತ್ರಣಕ್ಕೆ ಎಷ್ಟು ಕ್ರಮಗಳನ್ನು ಕೈಗೊಂಡ್ರೂ ಪ್ರಯೋಜನವಾಗ್ತಿಲ್ಲ. ಕೊರೊನಾ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಕಡ್ಡಾಯ. ಮಾಸ್ಕ್ ಧರಿಸುವುದು, ಹ್ಯಾಂಡ್ ಸ್ಯಾನಿಟೈಜರ್ ಬಳಸುವುದು ಅನಿವಾರ್ಯವಾಗಿದೆ. ರೋಗಿಗಳು ವೈದ್ಯರಿಗೆ ಸರಿಯಾದ ಮಾಹಿತಿ ನೀಡ್ತಿಲ್ಲ. ಇದ್ರಿಂದ ತೊಂದರೆಯಾಗ್ತಿದೆ ಎಂಬ ಮಾತುಗಳು ಕೇಳಿ ಬಂದಿವೆ.
ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಿವೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಅನೇಕರು ಎಚ್ಚರಿಕೆ ಸಂದೇಶಗಳನ್ನು ನೀಡ್ತಿದ್ದಾರೆ.