alex Certify ನೂತನ ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲರ ಗ್ರೀನ್ ಸಿಗ್ನಲ್: ಯಾವ ಸಚಿವರಿಗೆ ಯಾವ ಖಾತೆ…? ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೂತನ ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲರ ಗ್ರೀನ್ ಸಿಗ್ನಲ್: ಯಾವ ಸಚಿವರಿಗೆ ಯಾವ ಖಾತೆ…? ಇಲ್ಲಿದೆ ಮಾಹಿತಿ

ಬೆಂಗಳೂರು: 7 ನೂತನ ಸಚಿವರ ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲ ವಜೂಭಾಯ್ ವಾಲಾ ಅಂಕಿತಹಾಕಿದ್ದು, ಖಾತೆ ಹಂಚಿಕೆ ಬಗ್ಗೆ ಅಧಿಸೂಚನೆ ಹೊರಡಿಸಲಾಗಿದೆ.

7 ಹೊಸ ಸಚಿವರಿಗೆ ಖಾತೆ ಹಂಚಿಕೆ ಮಾಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, 10 ಸಚಿವರ ಖಾತೆಯನ್ನು ಬದಲಾವಣೆ ಮಾಡಿದ್ದಾರೆ.

ಯಾವ ಸಚಿವರಿಗೆ ಯಾವ ಖಾತೆ? ಇಲ್ಲಿದೆ ಮಾಹಿತಿ:

* ಉಮೇಶ್ ಕತ್ತಿ – ಆಹಾರ ಮತ್ತು ನಾಗರಿಕ ಪೂರೈಕೆ

* ಎಸ್.ಅಂಗಾರ – ಮೀನುಗಾರಿಕೆ ಮತ್ತು ಬಂದರು

* ಸಿ.ಸಿ ಪಾಟೀಲ್ – ಸಣ್ಣ ಕೈಗಾರಿಕೆ, ವಾರ್ತಾ ಇಲಾಖೆ

* ಅರವಿಂದ ಲಿಂಬಾವಳಿ – ಅರಣ್ಯ ಇಲಾಖೆ

* ಮುರುಗೇಶ್ ನಿರಾಣಿ – ಗಣಿ ಮತ್ತು ಭೂ ವಿಜ್ಞಾನ

* ಎಂಟಿಬಿ ನಾಗರಾಜ್ – ಅಬಕಾರಿ ಇಲಾಖೆ

* ಸಿ.ಪಿ.ಯೋಗೇಶ್ವರ್ – ಸಣ್ಣ ನೀರಾವರಿ ಖಾತೆ ನೀಡುವ ಸಾಧ್ಯತೆ ದಟ್ಟವಾಗಿದೆ.

ಸಚಿವ ಜೆ.ಸಿ ಮಾಧುಸ್ವಾಮಿ ಬಳಿಯಿದ್ದ ಕಾನೂನು ಮತ್ತು ಸಂಸದೀಯ ಖಾತೆಯನ್ನು ಹೆಚ್ಚುವರಿಯಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ವಹಿಸಲಾಗಿದೆ. ಡಾ.ಕೆ.ಸುಧಾಕರ್ ಬಳಿ ಇದ್ದ ವೈದ್ಯಕೀಯ ಶಿಕ್ಷಣ ಖಾತೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನು ಜೆ.ಸಿ.ಮಾಧುಸ್ವಾಮಿ ಅವರಿಗೆ ವಹಿಸಲಾಗಿದೆ. ಆನಂದ್ ಸಿಂಗ್ ಬಳಿಯಿದ್ದ ಅರಣ್ಯ ಇಲಾಖೆಯನ್ನು ಅರವಿಂದ ಲಿಂಬಾವಳಿಗೆ ನೀಡಲಾಗಿದ್ದು, ಆನಂದ್ ಸಿಂಗ್ ಅವರಿಗೆ ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ನೀಡಲಾಗಿದೆ. ಆರ್.ಶಂಕರ್ ಗೆ ಪೌರಾಡಳಿತ, ರೇಷ್ಮೆ ಖಾತೆ, ಗೋಪಾಲಯ್ಯ ಅವರಿಗೆ ತೋಟಗಾರಿಕೆ ಮತ್ತು ಸಕ್ಕರೆ ಹಾಗೂ ನಾರಾಯಣ ಗೌಡ ಹಜ್ ಮತ್ತು ವಕ್ಫ್ ಖಾತೆ ನೀಡಲಾಗಿದೆ.

ಹಣಕಾಸು, ಇಂಧನ, ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಖಾತೆಯನ್ನು ಮುಖ್ಯಮಂತ್ರಿ ಬ್.ಎಸ್.ಯಡಿಯೂರಪ್ಪ ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...