ಪಡಿತರ ಚೀಟಿ ಹೊಂದಿಲ್ಲದ ಸಾರ್ವಜನಿಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕೋವಿಡ್ 19 ಲಾಕ್ಡೌನ್ ಹಿನ್ನೆಲೆಯಲ್ಲಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿ ಸ್ವೀಕೃತಿ ಹೊಂದಿರುವ ಕುಟುಂಬಗಳಿಗೂ ಉಚಿತವಾಗಿ 10 ಕೆಜಿ ಅಕ್ಕಿ ನೀಡಲಾಗುತ್ತದೆ.
ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ. ಗೋಪಾಲಯ್ಯ ಈ ವಿಷಯ ತಿಳಿಸಿದ್ದು, ಲಾಕ್ ಡೌನ್ ಆಗಿರುವ ಕಾರಣ ಬಹುತೇಕ ಚಟುವಟಿಕೆಗಳು ಬಂದ್ ಆಗಿವೆ. ಹೀಗಾಗಿ ಪಡಿತರ ಚೀಟಿಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಸ್ವೀಕೃತಿ ಹೊಂದಿರುವ ಕುಟುಂಬಗಳಿಗೆ ಮೂರು ತಿಂಗಳುಗಳ ಕಾಲ 10 ಕೆಜಿ ಅಕ್ಕಿ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಫಲಾನುಭವಿಗಳು ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಈ ಉಚಿತ ಅಕ್ಕಿಯನ್ನು ಪಡೆಯಬಹುದಾಗಿದೆ ಎಂದು ತಿಳಿಸಿರುವ ಅವರು, ಈಗಾಗಲೇ ಏಪ್ರಿಲ್ ತಿಂಗಳ ಅಕ್ಕಿ ವಿತರಣೆ ಮಾಡಲಾಗಿದೆ. ಮೇ ಮತ್ತು ಜೂನ್ ತಿಂಗಳ ಅಕ್ಕಿ ವಿತರಣೆಗೆ ಸಿದ್ಧತೆ ನಡೆಸಲಾಗಿದೆ ಎಂದು ಹೇಳಿದ್ದಾರೆ.