ಪಿಎಸ್ಐ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಭರ್ಜರಿ ಬಂಪರ್ ಸುದ್ದಿಯೊಂದನ್ನು ನೀಡಿದೆ. ಆಕಾಂಕ್ಷಿಗಳ ಬಹುಕಾಲದ ಬೇಡಿಕೆಗೆ ಅಸ್ತು ಎನ್ನಲಾಗಿದ್ದು, ಸಚಿವ ಮಾಧುಸ್ವಾಮಿ ಮಾಧ್ಯಮಗೋಷ್ಠಿಯಲ್ಲಿ ಇದರ ಮಾಹಿತಿ ನೀಡಿದ್ದಾರೆ.
ಪಿಎಸ್ಐ ನೇಮಕದ ವೇಳೆ ವಯೋಮಿತಿ ಸಡಿಲಿಕೆ ಮಾಡಲಾಗಿದ್ದು, ಸಾಮಾನ್ಯ ಕೆಟಗರಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 28 ರಿಂದ 30 ವರ್ಷ ಹಾಗೂ ಇತರ ಮೀಸಲು ವರ್ಗದವರಿಗೆ 30 ರಿಂದ 32 ವರ್ಷದವರೆಗೆ ವಿನಾಯಿತಿ ನೀಡಲಾಗಿದೆ.
ಲಿಖಿತ ಪರೀಕ್ಷೆ ಅಥವಾ ಸಂದರ್ಶನಕ್ಕೆ ಅನ್ವಯವಾಗುವಂತೆ ಈ ಅವಕಾಶವನ್ನು ಒಂದು ಬಾರಿ ನೀಡಲಾಗುತ್ತಿದ್ದು, ಗುರುವಾರದಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಟ್ಟು ಎರಡು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ.