alex Certify ಪುರಸಭಾ ಸದಸ್ಯರಿಗೆ ಹಣದ ಆಮಿಷ, ಆರೋಪ ಸಾಬೀತಾದ್ರೆ ರಾಜೀನಾಮೆ ಎಂದ ಶಾಸಕ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪುರಸಭಾ ಸದಸ್ಯರಿಗೆ ಹಣದ ಆಮಿಷ, ಆರೋಪ ಸಾಬೀತಾದ್ರೆ ರಾಜೀನಾಮೆ ಎಂದ ಶಾಸಕ…!

ಕೋಲಾರ ಜಿಲ್ಲೆಯ ಮಾಲೂರು ಪುರಸಭೆ ಅಧ್ಯಕ್ಷ್ಯ ಉಪಾಧ್ಯಕ್ಷ ಚುನಾವಣೆ ನಿಗದಿಯಾಗಿದೆ. ಈ ಬೆನ್ನಲ್ಲೇ ಇದೀಗ ರಾಜಕೀಯ ಕೆಸರೆರಚಾಟಗಳು ಆರಂಭವಾಗಿವೆ. ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ತಿಕ್ಕಾಟ ಜೋರಾಗಿದ್ದು, ಇದರ ಮಧ್ಯೆ ಆಡಿಯೋ ಒಂದು ಫುಲ್ ವೈರಲ್ ಆಗಿದೆ.

ಹೌದು, ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಮತ್ತು ಶಾಸಕರ ಬೆಂಬಲಿಗರು ಬಿಜೆಪಿಯ ಪುರಸಭಾ ಸದಸ್ಯರಿಗೆ ಹಾಗೂ ಪಕ್ಷೇತರ ಸದಸ್ಯರಿಗೆ ಹಣದ ಆಮಿಷವನ್ನು ಒಡ್ಡಿದ್ದಾರೆ ಎಂದು ಆರೋಪಿಸಲಾಗಿತ್ತು. ಇದಕ್ಕೆ ಪೂರಕವೆಂಬಂತೆ ಆಡಿಯೋ ಕ್ಲಿಪ್ ಒಂದನ್ನು ಸಂಸದ ಮುನಿಸ್ವಾಮಿ ಬಹಿರಂಗಪಡಿಸಿದ್ದಾರೆ. ಈ ಆಡಿಯೋದಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡುವಂತೆ ಹೇಳಿದ್ದಾರೆ. ಜೊತೆಗೆ ಹಣವನ್ನೂ ನೀಡೋದಾಗಿ ಹೇಳಿದ್ದಾರೆ.

ಆಡಿಯೋ ರಿಲೀಸ್‌ಗೂ ಮೊದಲೇ ಈ ವಿಚಾರವಾಗಿ ಪ್ರತಿಕ್ರಿಯಿಸಿದ್ದ ಶಾಸಕ ನಂಜೇಗೌಡ, ನಾನು ಯಾರಿಗೂ ಯಾವುದೇ ಹಣದ ಆಮಿಷ ಒಡ್ಡಿಲ್ಲ. ಹಾಗೇನಾದರೂ ಸಾಬೀತಾದರೆ ನನ್ನ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ ಎಂದಿದ್ದರು. ಇದೀಗ ಆಡಿಯೋ ರಿಲೀಸ್ ಆಗಿದೆ. ಈ ಬಗ್ಗೆ ಮಾತನಾಡಿದ ಅವರು, ಅದರಲ್ಲಿರುವ ಆಡಿಯೋ ನನ್ನದಲ್ಲ. ಚುನಾವಣೆ ಮುಂದೂಡಿಕೆ ಮಾಡಲು ಬಿಜೆಪಿಯವರೇ ಈ ರೀತಿಯ ಕೆಲಸ ಮಾಡಿರಬಹುದು ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...