alex Certify ಪುರಸಭೆ ಮುಂದೆ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ; ಭುಜತಟ್ಟಿ ಸವಾಲು ಹಾಕಿದ ಕೈ ಶಾಸಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪುರಸಭೆ ಮುಂದೆ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ; ಭುಜತಟ್ಟಿ ಸವಾಲು ಹಾಕಿದ ಕೈ ಶಾಸಕ

ಬಳ್ಳಾರಿ: ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ಪುರಸಭೆ ಮುಂದೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಗಲಾಟೆ ನಿಲ್ಲಿಸುವ ಬದಲು ಕಾಂಗ್ರೆಸ್ ಶಾಸಕ ಭೀಮಾನಾಯ್ಕ್, ಕುಸ್ತಿಪಟುವಂತೆ ಭುಜತಟ್ಟಿ ಸವಾಲು ಹಾಕಿರುವ ಘಟನೆ ನಡೆದಿದೆ.

ಪುರಸಭೆ ಚುನಾವಣಾ ಫಲಿತಾಂಶದ ವೇಳೆ ಬಿಜೆಪಿ ಮುಖಂಡ ಗರಗದ ಪ್ರಕಾಶ್ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ವೇಳೆ ಸ್ಥಳದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಗಲಾಟೆ ನಡೆದಿದೆ. ಈ ವೇಳೆ ಸ್ಥಳಕ್ಕಾಗಮಿಸಿದ ಶಾಸಕ ಭೀಮಾನಾಯ್ಕ್ ಗಲಾಟೆ ಬಿಡಿಸುವುದನ್ನು ಬಿಟ್ಟು ಕಾರ್ಯಕರ್ತರಿಗೆ ಆವಾಜ್ ಹಾಕಿ ಭುಜತಟ್ಟಿ ಇನ್ನಷ್ಟು ಗಲಾಟೆಗೆ ಮುಂದಾಗಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕಾಂಗ್ರೆಸ್ ಶಾಸಕನ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...