alex Certify ಪೊಲೀಸರ ಎದುರೇ ಆರೋಪಿ ಆತ್ಮಹತ್ಯೆ ಪ್ರಕರಣ: ಸಬ್ ಇನ್ಸ್ ಪೆಕ್ಟರ್ ಅಮಾನತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸರ ಎದುರೇ ಆರೋಪಿ ಆತ್ಮಹತ್ಯೆ ಪ್ರಕರಣ: ಸಬ್ ಇನ್ಸ್ ಪೆಕ್ಟರ್ ಅಮಾನತು

ಬೆಂಗಳೂರು: ಪೊಲೀಸರ ಎದುರೇ ಬಂಧಿತ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್ ಇನ್ಸ್ ಪೆಕ್ಟರ್ ನ್ನು ಅಮಾನತು ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಸೈಟ್ ಕೊಡಿಸುವುದಾಗಿ ಹೇಳಿ ಜನರಿಗೆ ಲಕ್ಷಾಂತರ ರೂಪಾಯಿ ಟೋಪಿ ಹಾಕುತ್ತಿದ್ದ ಆರೋಪಿ ಸಿದ್ದಲಿಂಗಸ್ವಾಮಿ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಮನೆ ಪರಿಶೀಲನೆಗಾಗಿ ಆರೋಪಿ ಸಮೇತ ಕರೆದೊಯ್ದು ಪರಿಶೀಲಿಸುತ್ತಿದ್ದ ವೇಳೆ ಆರೋಪಿ ಸಿದ್ದಲಿಂಗಸ್ವಾಮಿ, ಪೊಲೀಸರನ್ನು ಹೊರಗೆ ತಳ್ಳಿ ಬಾಗಿಲು ಹಾಕಿಕೊಂಡು ಮನೆ ಬಾಲ್ಕನಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ.

ಈ ಕುರಿತು ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳು ಸಬ್ ಇನ್ಸ್ ಪೆಕ್ಟರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಕರ್ತವ್ಯ ಲೋಪ ಆರೋಪ ಹಿನ್ನೆಲೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಮಂಜುನಾಥ್ ಅವರನ್ನು ಇದೀಗ ಅಮಾನತು ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...