alex Certify ಪೊಲೀಸರ ವೇಷದಲ್ಲಿ ಚಿನ್ನಾಭರಣ ಅಂಗಡಿ ರೇಡ್; ಆಭರಣ ಕದ್ದು ಪರಾರಿಯಾದ ಖತರ್ನಾಕ್ ಕಳ್ಳರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸರ ವೇಷದಲ್ಲಿ ಚಿನ್ನಾಭರಣ ಅಂಗಡಿ ರೇಡ್; ಆಭರಣ ಕದ್ದು ಪರಾರಿಯಾದ ಖತರ್ನಾಕ್ ಕಳ್ಳರು

ಬೆಂಗಳೂರು: ಪೊಲೀಸರೆಂದು ಚಿನ್ನಾಭರಣ ಅಂಗಡಿ ಮೇಲೆ ದಾಳಿ ನಡೆಸಿದ ಕಳ್ಳರ ಗುಂಪು 800 ಗ್ರಾಂ ಚಿನ್ನ ಹಾಗೂ ದಾಖಲೆ ಪತ್ರಗಳನ್ನು ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಚಿನ್ನಾಭರಣ ಪಾಲಿಶ್ ಅಂಗಡಿ ಗೀತಾ ಜುವೆಲರ್ಸ್ ಗೆ ನುಗ್ಗಿದ 6 ಜನರ ಗುಂಪು ತಾವು ಪೊಲೀಸರು, ನಿಮ್ಮ ಅಂಗಡಿಯಲ್ಲಿ ನಕಲಿ ಚಿನ್ನ ಮಾರಾಟ ಮಾಡುತ್ತಿದ್ದ ಬಗ್ಗೆ ಆರೋಪ ಕೇಳಿಬಂದಿದೆ. ಹಾಗಾಗಿ ರೇಡ್ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಪರಿಶೀಲನೆ ನೆಪದಲ್ಲಿ 800 ಗ್ರಾಂ ಚಿನ್ನ, ದಾಖಲೆಗಳನ್ನು ಕದ್ದು ಎಸ್ಕೇಪ್ ಆಗಿದ್ದಾರೆ.

ಇಷ್ಟಕ್ಕೇ ನಿಂತಿಲ್ಲ ಕಳ್ಳರ ಆಟ…..ಮುಂದುವರೆದು ಜುವೆಲರ್ಸ್ ಮಾಲೀಕ ಕಾರ್ತಿಕ್ ಎಂಬುವವರಿಗೆ ಫೋನ್ ಮಾಡಿ, ನಾವು ಪೊಲೀಸರು ನಿಮ್ಮ ಅಂಗಡಿ ಮೇಲೆ ರೇಡ್ ಮಾಡಿದ್ದೇವೆ. ಪೊಲೀಸ್ ಠಾಣೆಗೆ ಬಂದು ವಿಚಾರಿಸಿ ಎಂದಿದ್ದಾರೆ.

ಗಾಬರಿಯಿಂದ ಬೆಂಗಳೂರಿನ ಹಲಸೂರು ಪೊಲೀಸ್ ಠಾಣೆಗೆ ಬಂದು ವಿಚಾರಿಸಿದಾಗ ಪೊಲೀಸರ ಸೋಗಿನಲ್ಲಿ ಬಂದ ಕಳ್ಳರ ಕೈಚಳಕ ಬಯಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...