alex Certify ಪೊಲೀಸ್ ‘ಹುದ್ದೆ’ಯ ಆಕಾಂಕ್ಷಿಗಳಿಗೆ ಇಲ್ಲಿದೆ ಒಂದು ಖುಷಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸ್ ‘ಹುದ್ದೆ’ಯ ಆಕಾಂಕ್ಷಿಗಳಿಗೆ ಇಲ್ಲಿದೆ ಒಂದು ಖುಷಿ ಸುದ್ದಿ

ಪೊಲೀಸ್ ಹುದ್ದೆಯ ಆಕಾಂಕ್ಷಿಗಳಿಗೆ ಖುಷಿ ಸುದ್ದಿಯೊಂದು ಇಲ್ಲಿದೆ. ಕಾನ್ಸ್ಟೇಬಲ್ ನೇಮಕಾತಿ ವಯೋಮಿತಿ ಹೆಚ್ಚಳ ಕುರಿತಂತೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇತರೆ ರಾಜ್ಯಗಳಂತೆ ಕರ್ನಾಟಕದಲ್ಲೂ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ವಯೋಮಿತಿಯನ್ನು ಹೆಚ್ಚಳ ಮಾಡಬೇಕೆಂದು ಕೆಲ ಆಕಾಂಕ್ಷಿಗಳು ಮನವಿ ಮಾಡಿದ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿ ಈ ವಿಷಯ ತಿಳಿಸಿದ್ದಾರೆ.

ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ ಹಾಗೂ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು 33 ವರ್ಷಕ್ಕೆ ನಿಗದಿ ಮಾಡಬೇಕು ಎಂದು ಮನವಿ ಮಾಡಲಾಗಿದ್ದು, ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪನವರ ಜೊತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...