alex Certify ಪ್ರಧಾನಿ ಮೋದಿ ತಪ್ಪಿನಿಂದಾಗಿ ಕೊರೊನಾ ಸೋಂಕು ಬಂದಿದೆ ಎಂದ ಮಾಜಿ ಸಚಿವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಧಾನಿ ಮೋದಿ ತಪ್ಪಿನಿಂದಾಗಿ ಕೊರೊನಾ ಸೋಂಕು ಬಂದಿದೆ ಎಂದ ಮಾಜಿ ಸಚಿವ

ಚಿತ್ರದುರ್ಗ: ತಯಾರಾಗದ ಕೊವಿಡ್ ವ್ಯಾಕ್ಸಿನ್ ನಲ್ಲೂ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ತಪ್ಪಿನಿಂದಾಗಿ ದೇಶಕ್ಕೆ ಕೊರೊನಾ ಬಂದಿದೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.

ಚಿತ್ರದುರ್ಗದಲ್ಲಿ ಮಾತನಾಡಿದ ಮಾಜಿ ಸಚಿವ, ಲಸಿಕೆ ಲಭ್ಯವಾದ ಬಳಿಕ ಕೇಂದ್ರ ಸರ್ಕಾರ ಇಡೀ ದೇಶಕ್ಕೆ ಉಚಿತವಾಗಿ ಕೊವಿಡ್ ಲಸಿಕೆ ಹಂಚಲಿ. ಯಾರಪ್ಪನ ಮನೆ ಗಂಟು ಹೋಗಬೇಕು ಎಂದು ಹೇಳಿದರು.

ಪ್ರಧಾನಿ ಮೋದಿ ತಪ್ಪಿನಿಂದಾಗಿ ದೇಶಕ್ಕೆ ಕೊರೊನಾ ಸೋಂಕು ಬಂದಿದೆ. ಡೊನಾಲ್ಡ್ ಟ್ರಂಪ್ ಕಾರ್ಯಕ್ರಮಗಳಿಂದಾಗಿ ವೈರಸ್ ಹರಡಿದೆ. 70-80 ಲಕ್ಷ ಸೋಂಕಿತರ ಶಾಪ ಬಿಜೆಪಿಗೆ ತಟ್ಟಲಿದೆ ಎಂದು ಕಿಡಿಕಾರಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೂಂಡಾಗಿರಿ ಮಾಡುತ್ತಿದ್ದಾರೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ರಾಮಲಿಂಗಾರೆಡ್ಡಿ, ಡಿಕೆಶಿ ಎಲ್ಲಿ ಗೂಂಡಾಗಿರಿ ಮಾಡಿದ್ದಾರೆ ಹೇಳಿ? ಸುಳ್ಳು ಹೇಳದಿದ್ದರೆ ಬಿಜೆಪಿಯವರಿಗೆ ನಿದ್ದೆ ಬರಲ್ಲ, ಊಟ ಸೇರಲ್ಲ. ಬಿಜೆಪಿಯಲ್ಲಿಯೇ ಹೆಚ್ಚು ಗೂಂಡಾಗಳು ಇರುವುದು ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...